ಬೆಂಗಳೂರು: ಸೂರ್ಯಕಾಂತಿ ಬೆಳೆ ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ರಾಜ್ಯ ಸರ್ಕಾರ ಮಹತ್ವದ ನೆರವು ನೀಡಿದ್ದು, ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿಸಲು ಆದೇಶ ಹೊರಡಿಸಿದೆ. ಸೂರ್ಯಕಾಂತಿ
ರಬಿ ಹಂಗಾಮಿನ ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ. ರೈತರು ಕಡಿಮೆ ಬೆಲೆಗೆ ಬೆಳೆ ಮಾರಾಟ ಮಾಡುವ ಪರಿಸ್ಥಿತಿ ತಪ್ಪಿಸಲು ಈ ನಿರ್ಧಾರ ಸಹಕಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯದ ಬಾಗಲಕೋಟೆ, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : 56,432 ಹುದ್ದೆಗಳ ನೇಮಕಾತಿಗೆ ತಕ್ಷಣ ಅಧಿಸೂಚನೆ ಹೊರಡಿಸಲು ಆಗ್ರಹ | ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಮನವಿ ಸೂರ್ಯಕಾಂತಿ
ಸೂರ್ಯಕಾಂತಿ ಬೆಳೆಗೆ ಪ್ರತಿ ಕ್ವಿಂಟಲ್ಗೆ ₹7,721 ಬೆಂಬಲ ಬೆಲೆ ನಿಗದಿಪಡಿಸಲಾಗಿದ್ದು, ರೈತರಿಂದ ನೇರವಾಗಿ ಖರೀದಿ ಮಾಡುವ ವ್ಯವಸ್ಥೆ ಜಾರಿಗೊಳ್ಳಲಿದೆ. ಇದರಿಂದ ಮಾರುಕಟ್ಟೆ ದರ ಕುಸಿತದಿಂದ ಉಂಟಾಗುತ್ತಿದ್ದ ನಷ್ಟದಿಂದ ರೈತರಿಗೆ ಕೆಲಮಟ್ಟಿನ ರಕ್ಷಣೆ ದೊರೆಯಲಿದೆ ಎಂದು ಹೇಳಲಾಗಿದೆ. ಸೂರ್ಯಕಾಂತಿ
ಇತ್ತೀಚಿನ ದಿನಗಳಲ್ಲಿ ಸೂರ್ಯಕಾಂತಿ ಬೆಲೆ ತೀವ್ರ ಕುಸಿದ ಹಿನ್ನೆಲೆಯಲ್ಲಿ ರೈತರು ಸರ್ಕಾರದ ಮಧ್ಯಸ್ಥಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು. ರೈತರ ಹೋರಾಟ ಮತ್ತು ಮನವಿಗಳಿಗೆ ಸ್ಪಂದಿಸಿ ಸರ್ಕಾರ ಖರೀದಿ ಪ್ರಕ್ರಿಯೆ ಆರಂಭಿಸಲು ಮುಂದಾಗಿದೆ ಎಂದು ರೈತ ಸಂಘಟನೆಗಳು ಪ್ರತಿಕ್ರಿಯಿಸಿವೆ.
ಬೆಂಬಲ ಬೆಲೆ ಯೋಜನೆಯಡಿ ಖರೀದಿಯಿಂದ ರೈತರಿಗೆ ನ್ಯಾಯಸಮ್ಮತ ದರ ಸಿಗುವುದರ ಜೊತೆಗೆ ಎಣ್ಣೆಬೀಜ ಉತ್ಪಾದನೆಗೆ ಉತ್ತೇಜನ ಸಿಗಲಿದೆ ಎಂದು ಕೃಷಿ ವಲಯದ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಸೂರ್ಯಕಾಂತಿ
ವಿಡಿಯೋ ನೋಡಿ : ಕರಾವಳಿ ಪ್ರವಾಸೋದ್ಯಮ : ಸ್ಥಳೀಯರ ಬದುಕು ಉಳಿಯಬೇಕೇ ಹೊರತು ಕಾರ್ಪೊರೇಟ್ ಲಾಭಕ್ಕಲ್ಲ – ಮುನೀರ್ ಕಾಟಿಪಳ್ಳ
