ಶಿವಸೇನೆ ಪಕ್ಷದ ಶಾಸಕರ ಅನರ್ಹತೆ ಪ್ರಶ್ನೆ: ಯಾವುದೇ ನಿರ್ಧಾರ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ಮುಂಬೈ: ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬಣದಲ್ಲಿರುವ ಶಿವಸೇನಾ ಪಕ್ಷದ ಶಾಸಕರ ಅನರ್ಹತೆಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಮುಂದುವರಿಸಬಾರದು ಎಂದು ಮಹಾರಾಷ್ಟ್ರ ವಿಧಾನಸಭೆ ಸಭಾದ್ಯಕ್ಷ  ರಾಹುಲ್‌ ನಾರ್ವೆಕರ್‌ ಅವರಿಗೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನಿಂದ ಉದ್ಭವಗೊಂಡಿರುವ ಎರಡೂ ಬಣಗಳ ಶಿವಸೇನೆಯ 53 ಶಾಸಕರಿಗೆ ಅನರ್ಹತೆ ನೋಟಿಸ್‌ಗಳನ್ನು ಜಾರಿ ಮಾಡಿರುವುದಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮಕೈಗೊಳ್ಳದಂತೆ ತಡೆ ನೀಡಲಾಗಿದ್ದು, ಪ್ರಕರಣದ ವಿಚಾರಣೆ ನಡೆಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಹೇಳಿದೆ.

ಉದ್ಧವ್‌ ಠಾಕ್ರೆ ಬಣದ ಸುನಿಲ್‌ ಪ್ರಭು ಸಲ್ಲಿಸಿರುವ ಮನವಿಯನ್ನು ಹಿರಿಯ ವಕೀಲ ಕಪಿಲ್‌ ಸಿಬಲ್‌ ವಾದ ಮಂಡಿಸಿದರು. ಏಕನಾಥ್ ಶಿಂಧೆ ಅವರ 39 ಶಾಸಕರ ಅನರ್ಹತೆಗೆ ಸಂಬಂಧಿಸಿದ ಪ್ರಕರಣ ಜುಲೈ 27ರಂದು ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿರುವುದಾಗಿ ತಿಳಿಸಿದ್ದಾರೆ.

ಪ್ರಕರಣವನ್ನು ನಿರ್ಧರಿಸಲು ಹೊಸ ಪೀಠ ರಚಿಸುವ ಅಗತ್ಯವಿದ್ದು, ಪ್ರಕರಣ ಪಟ್ಟಿ ಮಾಡಲು ಸ್ವಲ್ಪ ಸಮಯಬೇಕಿದೆ. ಅಲ್ಲಿಯವರೆಗೆ ಶಾಸಕರ ವಿರುದ್ಧ ಯಾವುದೇ ಕ್ರಮ ಅಥವಾ ವಿಚಾರಣೆಯನ್ನು ತೆಗೆದುಕೊಳ್ಳಬಾರದು ಎಂದು ನ್ಯಾಯಾಲಯವು ಅರ್ಜಿದಾರರರಿಗೆ ಸೂಚಿಸಿದೆ. ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಇವುಗಳನ್ನು ಸಭಾದ್ಯಕ್ಷರಿಗೆ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದರು.

ವಿಧಾನಸಭೆಯ ಉಪ ಸಭಾಧ್ಯಕ್ಷರು ಶಿವಸೇನೆಯ ಬಂಡಾಯ ಶಾಸಕರನ್ನು ಅನರ್ಹಗೊಳಿಸಿರುವುದನ್ನು ಪ್ರಸ್ನಿಸಿರುವ ಎರಡು ಅರ್ಜಿಗಳು ನ್ಯಾಯಾಲಯದ ಮುಂದಿವೆ. ಬಹುಮತ ಸಾಬೀತುಪಡಿಸುವಂತೆ ಕಾನೂನುಬಾಹಿರವಾಗಿ ಮಹಾರಾಷ್ಟ್ರ ರಾಜ್ಯಪಾಲರು ಆದೇಶಿಸಿರುವುದನ್ನು ಪ್ರಶ್ನಿಸಿ ಸುನಿಲ್‌ ಪ್ರಭು ಸಲ್ಲಿಸಿರುವ ಮೂರನೇ ಮನವಿ ಹಾಗೂ ಅಜಯ್‌ ಚೌಧರಿ ಮತ್ತು ಸುನಿಲ್‌ ಅವರನ್ನು ಕ್ರಮವಾಗಿ ಶಿವಸೇನೆಯ ಸದನದ ನಾಯಕ ಮತ್ತು ಮುಖ್ಯ ವಿಪ್‌ ಸ್ಥಾನದಿಂದ ನೂತನ ಸಭಾಧ್ಯಕ್ಷ ರಾಹುಲ್‌ ನಾರ್ವೆಕರ್‌ ವಜಾ ಮಾಡಿದ್ದನ್ನು ಪ್ರಶ್ನಿಸಿ ಪ್ರಭು ಸಲ್ಲಿಸಿರುವ ನಾಲ್ಕನೇ ಮನವಿಯು ಸುಪ್ರೀಂ ಕೋರ್ಟ್‌ ಮುಂದಿದೆ.

Donate Janashakthi Media

Leave a Reply

Your email address will not be published. Required fields are marked *