ಕೃಷಿ ವೆಚ್ಚ ಆಧಾರಿತ MSP ವಿಚಾರ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಕನಿಷ್ಠ ಬೆಂಬಲ ಬೆಲೆ (MSP) ನಿಗದಿಪಡಿಸುವಾಗ ಕೃಷಿ ವೆಚ್ಚದ ಕುರಿತು ರಾಜ್ಯಗಳ ಮಾಹಿತಿಗೆ ಸೂಕ್ತ ಪ್ರಾಮುಖ್ಯತೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಏಪ್ತಿಲ್‌ 13ರಂದು ಕೇಂದ್ರ ಸರ್ಕಾರ ಮತ್ತು ಇತರ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ನ್ಯಾಯಪೀಠವು ಅರ್ಜಿಯ ಕುರಿತು ಕೇಂದ್ರ ಸರ್ಕಾರ ಮತ್ತು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗ ಸೇರಿದಂತೆ ಇತರರಿಂದ ಪ್ರತಿಕ್ರಿಯೆ ಕೇಳಿದೆ.

ಅರ್ಜಿದಾರರ ಪರವಾಗಿ ಹಾಜರಾದ ವಕೀಲ ಪ್ರಶಾಂತ್ ಭೂಷಣ್, ಈ ವಿಷಯವು ದೇಶಾದ್ಯಂತ ರೈತರಿಗೆ ಸಂಬಂಧಿಸಿದ ಗಮನಾರ್ಹ ಕಳವಳಗಳನ್ನು ಹುಟ್ಟುಹಾಕಿದೆ ಎಂದು ವಾದಿಸಿದರು.

ಇದನ್ನೂ ಓದಿ: ಇರಾನ್ ಯುದ್ಧದಲ್ಲಿ 2 ವಾರಗಳ ಕದನ ವಿರಾಮ ಜಾರಿಯಾಗುವುದೇ?

“ಈ ಮನವಿಯು ದೇಶದ ರೈತರಿಗೆ ಸಂಬಂಧಿಸಿದ ಬಹಳ ಮುಖ್ಯವಾದ ವಿಷಯವನ್ನು ಎತ್ತುತ್ತದೆ” ಎಂದು ಅವರು ಹೇಳಿದರು.

ಕೃಷಿ ವೆಚ್ಚದ ಆಧಾರದ ಮೇಲೆ ನಿರ್ಧರಿಸಲಾದ MSP ನಲ್ಲಿ ಎಲ್ಲಾ ಅಧಿಸೂಚಿತ ಬೆಳೆಗಳ ಸಂಪೂರ್ಣ ಸಂಗ್ರಹಣೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನಗಳನ್ನು ಅರ್ಜಿಯು ಕೋರಿದೆ.

ಕನಿಷ್ಠ ಬೆಂಬಲ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಇಚ್ಛಿಸುವ ಎಲ್ಲಾ ರೈತರಿಂದ ಪೂರ್ಣ ಖರೀದಿಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸುವಂತೆಯೂ ಅದು ನ್ಯಾಯಾಲಯವನ್ನು ಕೋರಿದೆ.

ಇದನ್ನೂ ನೋಡಿ: ಇರಾನ್ ಪ್ರತಿರೋಧ – ಯು.ಎಸ್ (ಅಮೆರಿಕ) ಪತನದ ಆರಂಭವೆ? ಡಾ. ಬಿ.ಆರ್. ಮಂಜುನಾಥ್ , ಗುರುರಾಜ ದೇಸಾಯಿ ಮಾತುಕತೆ

Donate Janashakthi Media

Leave a Reply

Your email address will not be published. Required fields are marked *