ಬೆಂಗಳೂರು: ವಿಪಕ್ಷ ನಾಯಕ ಆರ್ ಅಶೋಕ್ ರ ವಿರುದ್ಧ ಬಗರ್ ಹುಕುಂ ಭೂಮಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ವಿಪಕ್ಷ ನಾಯಕ ಆರ್ ಅಶೋಕ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಒಂದು ವಾರಗಳ ಕಾಲ ಮುಂದೂಡಿದೆ. ಭೂಮಿ
ತಮ್ಮ ವಿರುದ್ಧ ತನಿಖೆಗೆ ತಡೆ ಕೋರಿ ಆರ್ ಅಶೋಕ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ 1 ವಾರಗಳ ಕಾಲ ಅರ್ಜಿ ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ: ದಸರಾ ಉದ್ಘಾಟಿಸಿ, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಟೀಕಾಕಾರರಿಗೆ ಬಾನು ಮುಷ್ತಾಕ್ ತಿರುಗೇಟು
ಪ್ರಕರಣದ ತನಿಖೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು . ಹಾಗಾಗಿ ವಿಪಕ್ಷ ನಾಯಕ ಆರ್ ಅಶೋಕ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ಕುರಿತು ವಿಚಾರಣೆ ನಡೆಸಿ 1 ವಾರದ ವರೆಗೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿತು.
ಇದನ್ನೂ ನೋಡಿ: ಧರ್ಮಸ್ಥಳ ಪ್ರಕರಣ | “ಕೊಂದವರು ಯಾರು ?” ಮಹಿಳಾ ಸಂಘಟನೆಗಳಿಂದ ಅಭಿಯಾನ Janashakthi Media
