“ಏಳು ತಿಂಗಳಿಗೆ ಹುಟ್ಟಿದವರಂತೆ ಆಡಬೇಡಿ” – ಸುರೇಶ್ ಕುಮಾರ್ ಮಾತಿಗೆ ಅಧಿವೇಶನದಲ್ಲಿ ಆಕ್ರೋಶ

ಬೆಂಗಳೂರು: ಕರ್ನಾಟಕ ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಸುರೇಶ್ ಕುಮಾರ್, “ಏಳು ತಿಂಗಳಿಗೆ ಹುಟ್ಟಿದವರಂತೆ ಆಡಬೇಡಿ” ಎಂಬ ಹೇಳಿಕೆಯು ಸದನದಲ್ಲಿ ಗದ್ದಲಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಸಚಿವ ಭೈರತಿ ಸುರೇಶ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸುರೇಶ್ ಕುಮಾರ್ ಮಾತನಾಡುತ್ತಿದ್ದಾಗ ಭೈರತಿ ಸುರೇಶ್ ಮಧ್ಯಪ್ರವೇಶಿಸಿದ್ದೂ, ಈ ವೇಳೆ ಸುರೇಶ್ ಕುಮಾರ್ “ಒಂಭತ್ತು ತಿಂಗಳಿಗೆ ಹುಟ್ಟಿದ್ರೆ ಸರಿಯಾಗುತ್ತಿತ್ತು, ಏಳು ತಿಂಗಳಿಗೆ ಹುಟ್ಟಿದ್ದೀರಾ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು | ಪುರಾಣಗಳು ಅಂಧನಂಬಿಕೆಯಲ್ಲ, ಬೌದ್ಧಿಕ ಕೃತಿಗಳು: ಮುಕುಂದರಾಜ್‌ ಅಭಿಪ್ರಾಯ

ಸುರೇಶ್ ಕುಮಾರ್ ಅವರ ಈ ಮಾತು ಸದನದಲ್ಲಿ ಆಕ್ರೋಶದ ಅಲೆಯ್ನುಎಬ್ಬಿಸಿದೆ. ಹಲವಾರು ಸದಸ್ಯರು, ಅದರಲ್ಲಿಯೂ ಪ್ರಿಯಾಂಕಾ ಮತ್ತು ಭೈರತಿ ಸುರೇಶ್ ಅವರು ತೀವ್ರವಾಗಿ ವಿರೋಧಿಸಿ, ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಕೂಡಲೇ ಕ್ಷಮೆ ಕೇಳಬೇಕೆಂದು ಆಗ್ರಹಿಸಿದರು. ಈ ಹೇಳಿಕೆ ಅನ್ ಪಾರ್ಲಿಮೆಂಟರಿ (ಅಸಂಸದೀಯ) ಎಂದು ಹಲವರು ವಾದಿಸಿದರು.

“ನೀವು ಹೆಲ್ತ್ ಮಿನಿಸ್ಟರ್ ಆಗಿದ್ದೀರಾ. ಏಳು ತಿಂಗಳಲ್ಲಿ ಯಾರೂ ಹುಟ್ಟೋದೇ ಇಲ್ವಾ? ಪ್ರೀ ಮೆಚ್ಯೂರ್ ಬೇಬಿ ಹುಟ್ಟಲ್ವಾ? ಏಳು ತಿಂಗಳಲ್ಲಿ ಹುಟ್ಟೋರಿಗೆ ಮಾನ ಮರ್ಯಾದೆ ಇಲ್ವಾ?” ಸದನದಲ್ಲಿ ಶಾಸಕರೊಬ್ಬರು ಹೇಳಿದ್ದಾರೆ.

ಈ ಮಾತಿನಿಂದ ಏಳು ತಿಂಗಳಲ್ಲಿ ಜನಿಸಿದವರ ಕುರಿತು ಅಪಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ವಾಗ್ವಾದ ತಾರಕಕ್ಕೇರಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ, ಸುರೇಶ್ ಕುಮಾರ್ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಅವರು ಹೇಳಿದ ಮಾತನ್ನು ಕಡತದಿಂದ ತೆಗೆದುಹಾಕಿ ಎಂದು ಸ್ಪೀಕರ್​​​ಗೆ ಹೇಳಿದ್ರು, ತಕ್ಷಣ ಎದ್ದು ನಿಂತು ಸುರೇಶ್ ಕುಮಾರ್ ಅವರು ತಾವು ಏಳು ತಿಂಗಳು, ಒಂಬತ್ತು ತಿಂಗಳು ಎಂದು ಹೇಳಿದ ಮಾತನ್ನು ವಾಪಸ್ ತೆಗೆದುಕೊಳ್ಳುವುದಾಗಿ ಹೇಳಿದರು.

ಇದನ್ನೂ ನೋಡಿ: ಸಂಕ್ರಾಂತಿ ಕವಿಗೋಷ್ಠಿ | ಕಾವ್ಯಗಳ ಹುಗ್ಗಿಯ ಸಂಭ್ರಮ Janashakthi Media

Donate Janashakthi Media

Leave a Reply

Your email address will not be published. Required fields are marked *