ಅತ್ಯಾಚಾರ ಎಸಗಿ, ಸಂತ್ರಸ್ತೆಗೆ 10 ಲಕ್ಷರೂ ಆಮಿಷ ನೀಡಿದ ಸ್ವಾಮೀಜಿ

ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಲ್ತಾನ್​ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮಿ ಅತ್ಯಾಚಾರ ಎಸಗಿ, ಸಂತ್ರಸ್ತೆಗೆ 10 ಲಕ್ಷ ನೀಡಿ ಸೆಟಲ್ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮೂಲತಃ ಆಂಧ್ರಪ್ರದೇಶ ಮೂಲದವರಾದ ಸಂತ್ರಸ್ತ ಮಹಿಳೆ ಕಳೆದ 6 ತಿಂಗಳಿಂದ ಅಪ್ರಾಪ್ತ ಪುತ್ರಿ ಜೊತೆ ಮಠದಲ್ಲೇ ವಾಸ್ತವ್ಯ ಹೂಡಿದ್ದರು ಎನ್ನಲಾಗಿದೆ. ದೌಜನ್ಯದ ಬಳಿಕ ಸ್ವಾಮೀಜಿ ವಿರುದ್ಧ ದೂರು ನೀಡಲು‌ ಸಂತ್ರಸ್ತೆ ಠಾಣೆಗಳಿಗೆ ಅಲೆದಾಡಿದ್ದಾರೆ.

ಇದನ್ನೂ ಓದಿ: 62 ಅಬಕಾರಿ ವಿಭಾಗ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಗಾಂಜಾ, ಮದ್ಯದ ಬಾಟಲಿಗಳು,ರೂ.2 ಲಕ್ಷ ರೂ. ಪತ್ತೆ

ಠಾಣೆಯ ವಿಜಿಟರ್ ರಿಜಿಸ್ಟರ್ ಬುಕ್​​ನಲ್ಲಿ ಸಂತ್ರಸ್ತ ಮಹಿಳೆಯ ಹೆಸರು, ವಿಳಾಸ ದಾಖಲಾಗಿದೆ. ಆದರೆ ಈಗ ಎಲ್ಲೂ ಕಾಣಿಸಿಕೊಳ್ಳದೆ ಮಗಳ ಜೊತೆ ಮಹಿಳೆ ತೆರಳಿದ್ದಾರೆ. ಮೊಬೈಲ್ ಸ್ವಿಚ್ಡ್ ಆಫ್ ಮಾಡಿ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಕುರಿತು ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ನನ್ನ ವಿರುದ್ಧದ ಆರೋಪಗಳೆಲ್ಲಾ ನಿರಾಧಾರ. ಆ ಮಹಿಳೆ ಮಠದ ಗೋಶಾಲೆಯಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಮಠದಲ್ಲಿ ನಮ್ಮ ಭಕ್ತರಿಗೂ ಮತ್ತೆ ಅವರಿಗೂ ಸ್ವಲ್ಪ ಜಗಳ ಆಗಿತ್ತು. ಹೊರಗೆ ಕಳುಹಿಸಿದ್ದೇವೆ. ಸೆಟಲ್‌ಮೆಂಟ್ ಎಂಬುದು ಸುಳ್ಳು ಎಂದು ತಿಳಿಸಿದರು.

ಇದನ್ನೂ ನೋಡಿ: “ರಸ್ತೆಯಲ್ಲಿ ಗುಂಡಿಯೋ ಗುಂಡಿಯಲ್ಲಿ ರಸ್ತೆಯೋ” ಶಾಸಕರೇ ಉತ್ತರಿಸಿJanashakthi Media

Donate Janashakthi Media

Leave a Reply

Your email address will not be published. Required fields are marked *