ಸ್ವಾತಂತ್ರ್ಯ ಹೋರಾಟದಲ್ಲಿ ಆರ್‌ಎಸ್‍ಎಸ್‍ನವರು ಭಾಗಿಯಾಗಿಲ್ಲ-ಬ್ರಿಟಿಷರೊಂದಿಗೆ ಇದ್ರು: ಎಂ.ಬಿ.ಪಾಟೀಲ್

ಬೆಂಗಳೂರು: ಕೋಮು ಸಾಮರಸ್ಯವನ್ನು ಬಿಜೆಪಿಯವರು ಹಾಳು ಮಾಡುತ್ತಿದ್ದಾರೆ. ಹೀಗೆ ಮಾಡುವುದರಿಂದ ಚುನಾವಣೆಯಲ್ಲಿ ಮತ ಪಡೆಯಬಹುದು ಎಂಬ ಲೆಕ್ಕಾಚಾರದಲ್ಲಿ ಬಿಜೆಪಿಯವರಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯವರು ಭಾಗಿಯಾಗಿರಲಿಲ್ಲ. ಕ್ವಿಟ್ ಇಂಡಿಯಾ ಚಳವಳಿ ಸಂದರ್ಭದಲ್ಲಿ ಆರ್‍ಎಸ್‍ಎಸ್‍ನವರು ಬ್ರಿಟಿಷರೊಂದಿಗೆ ಇದ್ದರು. ಅವರು ಈಗ ದೇಶದ ಇತಿಹಾಸ ಗೊತ್ತಿಲ್ಲದೆ ಮಾತನಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್‌ ಆರೋಪಿಸಿದರು.

ಇದನ್ನು ಓದಿ: ಸಂತೋಷ್ ಪಾಟೀಲ್ ಆತ್ಮಹತ್ಯೆ: ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ-ಬಂಧಿಸಿ, ಸಂಪುಟದಿಂದ ವಜಾ ಮಾಡಿ

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್‌ ರಸ್ತೆ ಹಾಗೂ ಪ್ರದೇಶಗಳಿಗೆ ಹಿಂದೂಯೇತರರ ಹೆಸರು ತೆಗೆದು ಹಾಕುವ ವಿಚಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಸಂತೋಷ ಪಾಟೀಲ್ ಆತ್ಮಹತ್ಯೆ ಪತ್ರ ಬರೆದಿಟ್ಟಿರುವ ಬಗ್ಗೆ ಸತ್ಯಾಸತ್ಯತೆ ನನಗೆ ಗೊತ್ತಿಲ್ಲ. ಸರ್ಕಾರ, ಮುಖ್ಯಮಂತ್ರಿ, ಗೃಹ ಸಚಿವರು ಈ ಬಗ್ಗೆ ಸತ್ಯಾಸತ್ಯತೆ ತಿಳಿದುಕೊಂಡು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

Donate Janashakthi Media

Leave a Reply

Your email address will not be published. Required fields are marked *