ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ – ನಟಿ ರಮ್ಯಾ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ನಟಿ ರಮ್ಯಾ ವಾಗ್ದಾಳಿ ನಡೆಸಿದ್ದಾರೆ.

ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ನಟಿ ರಮ್ಯಾ ತಮ್ಮದೇ ಶೈಲಿಯಲ್ಲಿ ಇನ್‌ಸ್ಟಾಗ್ರಾಮ್ (Instagram) ಸ್ಟೋರಿಯಲ್ಲಿ, ತೇಜಸ್ವಿ ಸೂರ್ಯ ಅವರು ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಭಾಷಣ ಮಾಡುತ್ತಿರುವ ವಿಡಿಯೋದ ಝಲಕ್‌ನ್ನು ಹಂಚಿಕೊಂಡು ಅವರ ತಲೆಯಲ್ಲಿ ಮೆದುಳೇ ಇಲ್ಲವೆಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ  ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಇದನ್ನೂ ಓದಿ : “ತೇಜಸ್ವಿ ಸೂರ್ಯನಲ್ಲಿ ಸಾವರ್ಕರ್ ಕಂಡೆ” ನೆಟ್ಟಿಗರಿಂದ ಟ್ರೋಲ್ ಆದ ಸಂಸದ

ತೇಜಸ್ವಿ ಸೂರ್ಯ ಹೇಳಿದ್ದೇನು..?
ಉಡುಪಿಯಲ್ಲಿ ಪರ್ಯಾಯ ಅದಮಾರು ಮಠದ ವಿಶ್ವರೂಪಂ ಕಾರ್ಯಕ್ರಮದಲ್ಲಿ ಮಾತನಾಡಿದ್ದ ತೇಜಸ್ವಿ ಸೂರ್ಯ, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೇ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ. ಟಿಪ್ಪುವಿನ ಖಡ್ಗದ ಕಾರಣಕ್ಕೆ ಬಹಳ ಮತಾಂತರಗಳು ಆಗಿವೆ. ಅಸಾಧ್ಯ ಎನ್ನುವುದು ಯಾವುದೂ ಇಲ್ಲ. ಇದರಿಂದಾಗಿ ಟಿಪ್ಪು ಜಯಂತಿಯಂದೇ ನಾವು ಹಿಂದೂ ಧರ್ಮಕ್ಕೆ ಮರುಮತಾಂತರ ಮಾಡಬೇಕು ಎಂದಿದ್ದರು.

 

Donate Janashakthi Media

Leave a Reply

Your email address will not be published. Required fields are marked *