ಭಯೋತ್ಪಾದನೆಗೆ ಸಂಚು: ಪಿಎಫ್‌ಐನ ಪ್ರಮುಖನ ಬಂಧನ

ಭಯೋತ್ಪಾದನೆಗೆ ಸಂಚು ಪ್ರಕರಣಕ್ಕೆ ಸಂಬಂಧಪಟ್ಟಂತೆ ತೆಲಂಗಾಣ ಪೊಲೀಸರು ಪಿಎಫ್‌ಐನ ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಪಿಎಫ್‌ಐನ ತೆಲಂಗಾಣ ಉತ್ತರದ ರಾಜ್ಯ ಕಾರ್ಯದರ್ಶಿ ಅಬ್ದುಲ್‌ ಸಲೀಂ ಎಂದು ತಿಳಿದು ಬಂದಿದೆ. ಈತ 2022ರ ಜುಲೈನಲ್ಲಿ ನಿಜಾಮಾಬಾದ್‌ನಲ್ಲಿ ನಡೆದಿದ್ದ ಭಯೋತ್ಪಾದನೆಗೆ ಸಂಚು ರೂಪಿಸಿದ್ದ
ಪ್ರಕರಣದ ಆರೋಪಿಯಾಗಿದ್ದಾನೆ.

ಗುಪ್ತಚರ ಇಲಾಖೆಯ ನೇತೃತ್ವದಲ್ಲಿ ನಡೆದಿದ್ದ ಕಾರ್ಯಾಚರಣೆಯಲ್ಲಿ ಆಂಧ್ರದ ಕಡಪಾ ಜಿಲ್ಲೆಯ ಮೈದಕೂರಿನಲ್ಲಿ ಅಬ್ದುಲ್‌ ಸಲೀಂನನ್ನು ಬಂಧಿಸಲಾಗಿತ್ತು. ಈತನ ವಿರುದ್ಧ 2022 ರ ಆಗಸ್ಟ್‌ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡು 2022ರ ಡಿಸೆಂಬರ್‌ನಲ್ಲಿ ಅಬ್ದುಲ್‌ ಸಲೀಂ ಸೇರಿದಂತೆ 11 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್‌ ಸಲ್ಲಿಸಿತ್ತು.

 

Donate Janashakthi Media

Leave a Reply

Your email address will not be published. Required fields are marked *