ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಗಳಾಗಿ 10 ಮಂದಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು:  ರಾಜ್ಯ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾಯಂಗೊಂಡ 10 ನ್ಯಾಯಮೂರ್ತಿಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಬೋಧಿಸಿದರು.

ಹೆಚ್ಚುವರಿ ನ್ಯಾಯಮೂರ್ತಿಗಳಾದ ಶಿವಶಂಕರ್ ಅಮರಣ್ಣವರ್, ಮಕ್ಕಿಮನೆ ಎಂ. ಗಣೇಶಯ್ಯ ಉಮಾ, ವೇದವ್ಯಾಸಚಾರ್ ಶ್ರೀಶಾನಂದ, ಹಂಚಟೆ ಸಂಜೀವಕುಮಾರ್, ಪದ್ಮರಾಜ್ ನೇಮಚಂದ್ರ ದೇಸಾಯಿ, ಪಿ. ಕೃಷ್ಣ ಭಟ್, ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್, ರವಿ ವೆಂಕಪ್ಪ ಹೊಸಮನಿ ಮತ್ತು ಸವಣೂರು ವಿಶ್ವಜೀತ್ ಶೆಟ್ಟಿ ಅವರು ಪ್ರಮಾಣ ವಚನ ಸ್ವೀಕರಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್‌ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಮತ್ತಿತರ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *