ಬಾಲಕನಿಗೆ ಚುಂಬಿಸಿದ ಪ್ರಕರಣ : ಕುಟುಂಬಸ್ಥರಿಗೆ ಕ್ಷಮೆ ಕೇಳಿದ ದಲೈಲಾಮಾ

ವದೆಹಲಿ: ಟಿಬೆಟಿಯನ್‌ ಧರ್ಮಗುರು ದಲೈಲಾಮಾ ಬಾಲಕನೊಬ್ಬನಿಗೆ ಮುತ್ತಿಟ್ಟು ತಮ್ಮ ನಾಲಿಗೆ ಚೀಪುವಂತೆ ಕೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ದಲೈಲಾಮಾ ಕ್ಷಮೆ ಕೇಳಿದ್ದಾರೆ.

ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಧರ್ಮಗುರುವಿಗೆ ಗೌರವ ಸಲ್ಲಿಸಲು ಬಂದಿದ್ದ ಬಾಲಕನ ತುಟಿಗಳನ್ನು ದಲೈಲಾಮಾ ಚುಂಬಿಸಿದ್ದರು.

ನಂತರ ತಮ್ಮ ನಾಲಿಗೆಯನ್ನು ಹೊರ ಚಾಚಿ ಅದನ್ನು ಚೀಪುವಂತೆ ಬಾಲಕನಿಗೆ ಹೇಳಿದ್ದರು. ಈ ವಿಡಿಯೊ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಸಾಮಾಜಿಕ ಜಾಲತಾಣ ಬಳಕೆದಾರರಿಂದ ಆಕ್ರೋಶದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಘಟನೆ ಬಗ್ಗೆ ದಲೈಲಾಮಾ ಕ್ಷಮೆ ಕೋರಿ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ : ರೈಲ್ವೇ ಟಿಕೇಟ್‌ ನೀಡುವಲ್ಲಿ ಕರ್ತವ್ಯ ಲೋಪ; ಕ್ಷಮೆ ಕೋರಿ ಹಣ ಹಿಂದಿರುಗಿಸಿದ ಇಲಾಖೆ

ಬಾಲಕ ಮತ್ತು ಅವನ ಕುಟುಂಬಕ್ಕೆ ಉಂಟಾದ ನೋವಿಗೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ. ಘಟನೆ ಬಗ್ಗೆ ಅವರ ಕಚೇರಿಯು ಟ್ವೀಟ್‌ ಮಾಡಿ ಹೇಳಿಕೆ ನೀಡಿದ್ದು, ‘ದಲೈಲಾಮಾ ಅವರು ಮುಗ್ಧ ಮತ್ತು ತಮಾಷೆಯ ರೀತಿಯಲ್ಲಿ ಭೇಟಿಯಾಗುವ ಜನರನ್ನು ಆಗಾಗ್ಗೆ ಕೀಟಲೆ ಮಾಡುತ್ತಿರುತ್ತಾರೆ’ ಎಂದು ಹೇಳಿದೆ.

Donate Janashakthi Media

Leave a Reply

Your email address will not be published. Required fields are marked *