ಡಿ ಕೆ ಶಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ ಡಿ) ಮತ್ತೆ ಸಮನ್ಸ್  ಜಾರಿ

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಅವರ ಸಹೋದರ, ಸಂಸದ ಡಿ ಕೆ ಸುರೇಶ್ ಅವರಿಗೆ  ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ ಡಿ) ಮತ್ತೆ ಸಮನ್ಸ್  ಜಾರಿ ಮಾಡಿದೆ.

ಈ ಮೊದಲು ಸೆ 23 ರಂದು ಇವರಿಬ್ಬರಿಗೂ ವಿಚಾರಣೆಗೆ ಬರುವಂತೆ ಇ ಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ ಭಾರತ್ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಕಾಲಾವಕಾಶ ನೀಡುವಂತೆ ಶಿವಕುಮಾರ್ ಹಾಗೂ ಸುರೇಶ್ ಅವರು ಪತ್ರ ಬರೆದು ಕೋರಿದ್ದರು. ಈ ಮನವಿ ನಿರಾಕರಿಸಿರು ಇಡಿ ಅ.7 ರಂದು ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಅ.5 ರಂದು ಮತ್ತೊಂದು ನೋಟಿಸ್ ಜಾರಿ ಮಾಡಿದೆ. ಪಕ್ಷದ ಮುಖಂಡರ ಜತೆ ಸಮಾಲೋಚನೆ ನಡೆಸಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *