ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮುನಿರತ್ನ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮಂಗಳವಾರಕ್ಕೆ ಅಕ್ಟೋಬ್ರ 8 ಕ್ಕೆ ​​ಮುಂದೂಡಿಕೆ ಆದೇಶ ನೀಡಿ ಆಘಾತ ಉಂಟುಮಾಡಿದೆ. ಬಿಜೆಪಿ 

ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿರುವ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ​ ವಿಶೇಷ ನ್ಯಾ. ಸಂತೋಷ್‌ ಗಜಾನನ ಭಟ್‌ ಅರ್ಜಿ ವಿಚಾರಣೆಯನ್ನು ಮುಂದೂಡಿ ಆದೇಶವನ್ನು ನೀಡಿದ್ದಾರೆ.

ಇದನ್ನೂ ಓದಿ: ಬಾಹ್ಯಾಕಾಶದ ಗಗನಯಾತ್ರಿಗಳ ಮಾನಸಿಕ ಯೋಗಕ್ಷೇಮಕ್ಕೆ ನಿಮ್ಹಾನ್ಸ್ ಪರಿಹಾರ ಒದಗಿಸಬೇಕು: ಇಸ್ರೋ ಅಧ್ಯಕ್ಷ

ಕಗ್ಗಲೀಪುರ ಪೊಲೀಸ್​​ ಠಾಣೆಯಲ್ಲಿ ಸಂತ್ರಸ್ತೆಯೋರ್ವರು ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್​ ದಾಖಲಿಸಿದ್ದರು. ತದನಂತರದಲ್ಲಿ ಮುನಿರತ್ನ ವಿರುದ್ಧದ ಪ್ರಕರಣಗಳನ್ನು ರಾಜ್ಯ ಸರ್ಕಾರವು ವಿಶೇಷ ತನಿಖಾ ದಳಕ್ಕೆ (SIT) ತನಿಖೆಗೆ ವಹಿಸಿ ಆದೇಶ ನೀಡಿತ್ತು. ಇನ್ನು ಮುನಿರತ್ನ ಬಿಬಿಎಂಪಿ ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿರುವ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣವನ್ನು ಎದುರಿಸುತ್ತಿದ್ದಾರೆ.

ಇದನ್ನೂ ನೋಡಿ: ನಮ್ಮನ್ನು ಖಾಯಂ ಮಾಡಿ, ಸಮಾನ ವೇತನ ನೀಡಿ – ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *