ಆಪರೇಷನ್ ಹಸ್ತ| ಕಾಂಗ್ರೆಸ್ ಕೊಟ್ಟ ಆಹ್ವಾನ ಬಹಿರಂಗಪಡಿಸಿದ ಜೆಡಿಎಸ್ ಶಾಸಕ

ಬೆಂಗಳೂರು : ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಗೆ ಕಾಂಗ್ರೆಸ್ ಅಸ್ತ್ರ ಪ್ರಯೋಗಿಸುತ್ತಿದೆ. ಬಿಜೆಪಿ ಹಾಗೂ ಜೆಡಿಎಸ್​ ಶಾಸಕರು, ನಾಯಕರುಗಳಿಗೆ ಗಾಳ ಹಾಕಿದೆ. ಈ ಮೊದಲು ಬಿಜೆಪಿ ಶಾಸಕರಾದ ಎಸ್​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವು ನಾಯಕರಿಗೆ ಗಾಳ ಹಾಕಿತ್ತು. ಇದೀಗ ಆಪರೇಷನ್ ಹಸ್ತ ಜೆಡಿಎಸ್​ನತ್ತ ತಿರುಗಿದೆ. ತುರುವೇಕೆರೆ ಕ್ಷೇತ್ರದ ಜೆಡಿಎಸ್​ ಶಾಸಕ ಎಂ.ಟಿ. ಕೃಷ್ಣಪ್ಪ ಅವರಿಗೆ ಕಾಂಗ್ರೆಸ್​ ಸೇರುವಂತೆ ಆಹ್ವಾನ ಕೊಡಲಾಗಿದೆ. ಈ ಬಗ್ಗೆ ಸ್ವತಃ ಶಾಸಕ ಕೃಷ್ಣಪ್ಪ ಅವರೇ ಇದೀಗ ಬಹಿರಂಗಪಡಿಸಿದ್ದಾರೆ.ಆಪರೇಷನ್ ಹಸ್ತ

ಇದನ್ನೂ ಓದಿ:ಜೆಡಿಎಸ್‌ ವಿರುದ್ಧ ಪರೋಕ್ಷವಾಗಿ ಮುನಿಸು ಹೊರ ಹಾಕಿದ ಸಿಎಂ ಇಬ್ರಾಹಿಂ..!

ಈ ಬಗ್ಗೆ ತುಮಕೂರಿನ ತುರುವೇಕೆರೆಯಲ್ಲಿ ಮಾತನಾಡಿರುವ ಎಂ.ಟಿ. ಕೃಷ್ಣಪ್ಪ ಅವರು, ಕಾಂಗ್ರೆಸ್ ಪಕ್ಷದಿಂದ ನನಗೂ ಆಹ್ವಾನ ಬಂದಿದ್ದು ನಿಜ. ಆದ್ರೆ, ಕಾಂಗ್ರೆಸ್ ಏಕೆ ಹೋಗೋಣ? ಹೋಗುವಂತದ್ದು ಏನು ಇದೆ ಹೇಳಿ? ಕಾಂಗ್ರೆಸ್ ನವರೆ 136ಜನ ಇದ್ದು, ಓವರ್ ಲೋಡ್ ಆಗಿದೆ. ನಾವು ಎಲ್ಲಿ ಹೋಗಿ ಕುತಿಕೊಳ್ಳುವುದು ಎಂದು ಹೇಳಿದರು. ಈ ಮೂಲಕ ಕಾಂಗ್ರೆಸ್ ಆಹ್ವಾನವನ್ನು ನಿರಾಕರಿಸಿದ್ದಾರೆ.

ರಾಜ್ಯ ಕಾಂಗ್ರೆಸ್​​ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಮುಳುಗಿ ಹೋಗಿದೆ. ಒಂದು‌ ಕಡೆ ವರ್ಗಾವಣೆ ದಂಧೆ, ಮತ್ತೊಂದು ಕಡೆ ಕಮಿಷನ್ ದಂಧೆ ನಡೆಸುತ್ತಿದೆ ಎಂದು ಕಿಡಿಕಾರಿದ ಕೃಷ್ಣಪ್ಪ, ಕೇಳಿದ ಎಲ್ಲಾ ಕೆಲಸವನ್ನು ಡಿ.ಕೆ.ಶಿವಕುಮಾರ್​​ ಮಾಡಿಕೊಡುತ್ತಾರೆ. ವಿಧಾನಸೌದದಲ್ಲಿ ಡಿಸಿಎಂ ಡಿಕೆ ಚೇಂಬರ್​​ಗೆ ಹೋಗಿ ಮಾತಾಡ್ತೇನೆ. ಕಾಂಗ್ರೆಸ್​ಗೆ ಹೋಗುವಂತಹದ್ದು ಏನಿದೆ ಹೇಳಿ. ಕಾಂಗ್ರೆಸ್​ನಲ್ಲೇ 136 ಶಾಸಕರಿದ್ದು ಓವರ್​ ಲೋಡ್​ ಆಗಿ ಬಿಟ್ಟಿದೆ. ಸರ್ಕಾರ ಬಿದ್ದು ಹೋಗಲ್ಲ. ಬದಲಿಗೆ ಪಂಚರ್ ಆಗಿ ಮೂಲೆ‌ಯಲ್ಲಿ ನಿಂತಿಕೊಳ್ಳುತ್ತೆ ಎಂದು ಲೇವಡಿ ಮಾಡಿದರು.

ವಿಡಿಯೋ ನೋಡಿ:ಬಳ್ಳಿ ಮಾತ್ರವಲ್ಲ ಬೇರುಗಳನ್ನು ಕೂಡಾ ನಾಶ ಪಡಿಸಬೇಕು: ಚೈತ್ರ ಕುಂದಾಪುರ ವಂಚನೆ ಹಗರಣದ ಬಗ್ಗೆ ಹೋರಾಟಗಾರರ ಆಗ್ರಹ

Donate Janashakthi Media

Leave a Reply

Your email address will not be published. Required fields are marked *