ನಾನೂ  ಗೋಮಾಂಸ ತಿನ್ನುತ್ತೇನೆ: ಚಿತ್ರ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ

ಬೆಂಗಳೂರು: ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ವಿವೇಕ್‌ ಅಗ್ನಿಹೋತ್ರಿ ನೀಡಿರುವ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ‘ಎಲ್ಲಿ ಉತ್ತಮ ಗೋಮಾಂಸ ಸಿಗುವುದೆಂದು ಹಿಂದೆ ಬರೆದಿದ್ದೆ. ನಾನು ಅದನ್ನು ತಿನ್ನುತ್ತಿದ್ದೆ, ಈಗಲೂ ತಿನ್ನುತ್ತೇನೆ. ನನ್ನ ಬದುಕಲ್ಲಿ ಏನೂ ಬದಲಾಗಿಲ್ಲ’ ಎಂದು ವಿಡಿಯೊದಲ್ಲಿದೆ.

ರಣಬೀರ್ ಕಪೂರ್‌ ಪರ ಹಳೆಯ ವಿಡಿಯೋವೊಂದನ್ನು ಪ್ರಸ್ತಾಪಿಸಿ ದೇವಸ್ಥಾನ ಪ್ರವೇಶಿಸಲು ಭಜರಂಗದಳದ ಕಾರ್ಯಕರ್ತರು ಅವಕಾಶ ನೀಡದೆ ವಾಪಸ್ಸು ಕಳುಹಿಸಿದ ಘಟನೆ ಇತ್ತೀಚಿಗೆ ನಡೆದಿದ್ದು, ಇದೀಗ ‘ಕಾಶ್ಮೀರ್‌ ಫೈಲ್ಸ್‌’ ಚಿತ್ರದ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ವಿಡಿಯೋ ವೈರಲ್‌ ಆಗಿದ್ದು, ರಣಬೀರ್‌ ಕಪೂರ್‌ ಅಭಿಮಾನಿಗಳು ಸದಾ ಹಿಂದೂಪರ ಯೋಚನೆ ಮಾಡುವ ವಿವೇಕ್ ಬಗ್ಗೆ ಭಜರಂಗ ದಳ ಯಾಕೆ ಸುಮ್ಮನಿದೆ ಎಂದು ಹಲವರು ಪ್ರಶ್ನಿಸಿದ್ದಾರೆ.

ಗೋಮಾಂಸ ತಿನ್ನುತ್ತೇನೆ ಎಂದು ಬಹಿರಂಗವಾಗಿಯೇ ಹೇಳಿಕೊಂಡಿರುವ ವಿವೇಕ್ ಅಗ್ನಿಹೋತ್ರಿ ಸಿನಿಮಾಗಳನ್ನು ಬಹಿಷ್ಕರಿಸಬೇಕು ಮತ್ತು ಅವರನ್ನೂ ಯಾವುದೇ ದೇವಸ್ಥಾನದ ಒಳಗೆ ಬಿಡಕೂಡದು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

ಕೇವಲ ರಣಬೀರ್ ಗಷ್ಟೇ ಈ ಬಿಸಿ ತಾಗಬಾರದು, ವಿವೇಕ್ ಅಗ್ನಿಹೋತ್ರಿ ಮೇಲೂ ಕ್ರಮ ಆಗಬೇಕು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿವೇಕ್ ಅಗ್ನಿಹೋತ್ರಿ ಅವರ ವಿಡಿಯೋ ವೈರಲ್ ಆಗುತ್ತಿದ್ದರೂ, ಆ ಕುರಿತು ವಿವೇಕ್ ಅಗ್ನಿಹೋತ್ರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Donate Janashakthi Media

Leave a Reply

Your email address will not be published. Required fields are marked *