ರಾಜ್ಯದ ಜನರ ಹಿತ ಕಾಯಲು ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ನಾವು ನಮ್ಮ ಜನರನ್ನು ಕಾಪಾಡಲೇ ಬೇಕು. ಹೀಗಾಗಿ ಕಾವೇರಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟಿಗೆ ಹೋಗುತ್ತೇವೆ” ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಜ್ಯ

ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಸೋಮವಾರ ಸೆ-18 ನಡೆಯಲಿದ್ದು, ಅಲ್ಲಿ ನಮ್ಮ ವಾದ ಮಂಡಿಸುತ್ತೇವೆ. ಮಳೆಯಿಲ್ಲದೆ ತುಂಬಾ ಸಂಕಷ್ಟದಲ್ಲಿ ಇದ್ದೇವೆ ಎಂದು ಮನವರಿಕೆ ಮಾಡುತ್ತೇವೆ. ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ವೀಕ್ಷಣೆ ಮಾಡಬೇಕು ಎಂದು ಸುಪ್ರೀಂ ಕೋರ್ಟಿನಲ್ಲೂ ಮನವಿ ಮಾಡುತ್ತೇವೆ” ಎಂದು ತಿಳಿಸಿದರು. ರಾಜ್ಯ

ಇದನ್ನೂ ಓದಿ:ತಮ್ಮ ಸರ್ಕಾರ ತೆಗೆದವರನ್ನೇ ತಬ್ಬಿಕೊಳ್ಳುವ ದುಸ್ಥಿತಿಗೆ ಕುಮಾರಸ್ವಾಮಿ ಇಳಿದಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

“ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರನ್ನು ಭೇಟಿಯಾಗಿ ಈಗಾಗಲೇ ವಾಸ್ತವ ಸ್ಥಿತಿಯನ್ನು ವಿವರಿಸಿದ್ದೇವೆ. ಮುಖ್ಯಮಂತ್ರಿಗಳು ಸರ್ಕಾರದ ಪರವಾಗಿ ಬರೆದ ಪತ್ರವನ್ನು ತಲುಪಿಸಿದ್ದೇವೆ. ನೀವು ಶೀಘ್ರ ಮಧ್ಯಸ್ಥಿಕೆ ವಹಿಸಲೇಬೇಕು ಎಂದು ಮನವಿ ಮಾಡಿದ್ದೇನೆ.”

ಸಂಸತ್ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಸಂಸದರನ್ನು ಭೇಟಿ ಮಾಡುವ ಆಲೋಚನೆ ಇದೆ. ಸರ್ವಪಕ್ಷ ಸಭೆಗೆ ಪ್ರಧಾನಿಗಳು ಸಮಯ ಕೊಟ್ಟಿಲ್ಲ. ತಮಿಳುನಾಡಿನವರು ಅವರದ್ದೇ ಆದ ವಾದಗಳನ್ನು ಮಂಡಿಸುತ್ತಿದ್ದಾರೆ‌ ಎಂದರು. ರಾಜ್ಯ

ಮುಖ್ಯಮಂತ್ರಿಗಳು ಉತ್ತರಿಸುತ್ತಾರೆ

ಕೆ.ಎನ್.ರಾಜಣ್ಣ ಅವರು ಮೂರು ಡಿಸಿಎಂಗಳು ಅವಶ್ಯಕತೆ ಇದೆ ಎನ್ನುವ ಮಾತಿಗೆ “ನನ್ನನ್ನು ಈ ಹುದ್ದೆಗೆ ನೇಮಕ‌ ಮಾಡಿದ್ದು ಮುಖ್ಯಮಂತ್ರಿಗಳು. ಅವರೇ ಇದಕ್ಕೆ ಉತ್ತರ ನೀಡುತ್ತಾರೆ, ರಾಜಣ್ಣ ಅವರು ಏಕೆ ಈ ರೀತಿ ಹೇಳಿಕೆ ಕೊಟ್ಟರೊ ಗೊತ್ತಿಲ್ಲ. ನಾವೆಲ್ಲಾ ಮುಖ್ಯಮಂತ್ರಿಗಳ ಕೆಳಗೆ ಕೆಲಸ ಮಾಡುವವರು ಅವರನ್ನೇ ಕೇಳಬೇಕು.

ಕೆ.ಎನ್.ರಾಜಣ್ಣ ಅವರ ಬಳಿ ಮುಖ್ಯಮಂತ್ರಿಗಳು, ಹೈಕಮಾಂಡ್ ಉತ್ತರ ಕೇಳುತ್ತದೆ. ಹರಿಪ್ರಸಾದ್ ಅವರಿಗೆ ಹೈಕಮಾಂಡ್ ಪತ್ರ ಬರೆದಿದೆ. ನಾನು ಯಾರಿಗೆ ಉತ್ತರ ಕೊಡಬೇಕೋ ಅವರಿಗೆ ಮಾತ್ರ ಕೊಡುತ್ತೇನೆ. ನಾನು ಯಾರಿಗೆ ಉತ್ತರ ಕೇಳಬೇಕೋ ಅವರ ಬಳಿ ಕೇಳುತ್ತೇನೆ, ಯಾವುದೇ ಮುಲಾಜಿಲ್ಲ ನನಗೆ” ಎಂದು ಉತ್ತರಿಸಿದರು.

ಹೈಕಮಾಂಡ್ ಒಂದೇ ಡಿಸಿಎಂ ಎಂದು ಹೇಳಿದ ನಂತರವೂ ಈ ಬೆಳವಣಿಗೆ ಏಕೆ ಎನ್ನುವ ಪ್ರಶ್ನೆಗೆ “ನಾನು ಎರಡು ದಿನಗಳಿಂದ ಹೈದರಾಬಾದ್‌ನಲ್ಲಿ ಎಐಸಿಸಿ ಸಭೆಯಲ್ಲಿ ಇದ್ದೆ, ಮುಖ್ಯಮಂತ್ರಿಗಳು ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು, ಈಗ ತಿಳಿದುಕೊಂಡು ಹೇಳುವೆ” ಎಂದು ತಿಳಿಸಿದರು. ರಾಜ್ಯದ 

ಇದನ್ನೂ ಓದಿ:ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪನ್ನು ನಾವು ಗೌರವಿಸಬೇಕು: ಡಿಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕಾರಣವಿಲ್ಲ:

ಬಿ.ಕೆ.ಹರಿಪ್ರಸಾದ್ ಅವರ ವಿಚಾರದಲ್ಲಿ ಡಿ.ಕೆ.ಶಿವಕುಮಾರ್ ಅವರ ಬಣ ಮೌನ ತಾಳಿದ ಕಾರಣ ಡಿಸಿಎಂ ವಿವಾದ ಎದ್ದಿದೆ ಎನ್ನುವ ಪ್ರಶ್ನೆಗೆ “ನಮ್ಮ ಪಕ್ಷದಲ್ಲಿ ಯಾವುದೇ ಬಣವಿಲ್ಲ, ನಿಮ್ಮ ಬಳಿ ಇರಬೇಕು”. ನಿಮಗೆ ತಲೆ ಕೆಟ್ಟಿರಬೇಕು, ನೀವೆ ಬಣ ಸೃಷ್ಟಿ ಮಾಡುತ್ತಿದ್ದೀರಿ. ನನ್ನ ರಾಜಕೀಯ ಜೀವನದಲ್ಲಿ ಇದುವರೆಗೂ ಯಾವುದೇ ಬಣಕ್ಕೆ ನಾನು ಬೆಂಬಲ ಕೊಟ್ಟಿಲ್ಲ. ನನಗೆ ಬಣದ ಅವಶ್ಯಕತೆ ಇಲ್ಲ. ಎಸ್.ಎಂ.ಕೃಷ್ಣ ಅವರು, ಬಂಗಾರಪ್ಪ ಅವರ ಕಾಲದಲ್ಲಿ ಬಣ ಮಾಡಬಹುದಿತ್ತು, ನನ್ನದು ಕಾಂಗ್ರೆಸ್ ಬಣ. ಬಣದ ಬಗ್ಗೆ ನನ್ನ ಬಳಿ ಪ್ರಶ್ನೆ ಕೇಳಬೇಡಿ” ಎಂದು ಸಿಡಿಮಿಡಿಗೊಂಡರು.

ಬೆಂಗಳೂರಿನ ಕಸಕ್ಕೆ ಪರ್ಯಾಯ ವ್ಯವಸ್ಥೆ:

“ಬೆಂಗಳೂರಿನಲ್ಲಿ ಉತ್ಪಾದನೆಯಾಗುತ್ತಿರುವ ಕಸಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕಾರಣಕ್ಕೆ, ಗ್ರೇಟರ್ ಹೈದರಾಬಾದ್ ಮಹಾನಗರ‌ಪಾಲಿಕೆ ನಿರ್ವಹಣೆ ಮಾಡುವ ಬೃಹತ್ ತ್ಯಾಜ್ಯ ನಿರ್ವಹಣಾ ಘಟಕ ವೀಕ್ಷಣೆಗೆ ಶನಿವಾರ (ಸೆ.16) ಭೇಟಿ ನೀಡಲಾಗಿತ್ತು.

ಬೆಂಗಳೂರಿನ ಹೊರ ವಲಯದಲ್ಲಿ ಕಸ ವಿಲೇವಾರಿ ಮಾಡಲಾಗುತ್ತಿತ್ತು, ಈಗ ಸುತ್ತಲಿನ ಜನವಸತಿ ಪ್ರದೇಶಗಳು ಬೆಳೆದು ಜನರು ಕಷ್ಟ ಪಡುತ್ತಿದ್ದಾರೆ. ಅಂತರ್ಜಲ, ಪರಿಸರ ಹಾಳಾಗುತ್ತಿದೆ, ಇದಕ್ಕೆ ಪರ್ಯಾಯ ವ್ಯವಸ್ಥೆ ಹೇಗೆ ಮಾಡಬಹುದು ಎಂದು ಅಧ್ಯಯನ ನಡೆಸಲು ಭೇಟಿ ನೀಡಲಾಯಿತು. ಕಸವನ್ನು ರಸ ಮಾಡುವ, ವಿದ್ಯುತ್ ತಯಾರಿಸುವ ತಂತ್ರಜ್ಞಾನ ಇದ್ದು ಅದನ್ನು ರಾಜ್ಯದಲ್ಲಿ ಹೇಗೆ ಅಭಿವೃದ್ಧಿ ಮಾಡಬಹುದು ಎಂದು ಯೋಜನೆ ರೂಪಿಸಲಾಗುವುದು.” ಎಂದು ಡಿಕೆಶಿ ತಿಳಿಸಿದರು.

Donate Janashakthi Media

Leave a Reply

Your email address will not be published. Required fields are marked *