ಬೆಂಗಳೂರು: ನೆನ್ನೆ ಗುರುವಾರ, ನಗರದ ಶೇಷಾದ್ರಿಪುರಂ ಠಾಣೆ ಪೊಲೀಸರು ನಾಲ್ಕು ತಿಂಗಳ ಗರ್ಭಿಣಿಯನ್ನು ರಾತ್ರಿ 10 ಗಂಟೆವರೆಗೆ ಠಾಣೆಯಲ್ಲೇ ಕೂರಿಸಿಕೊಂಡಿದ್ದಾರೆ. ಓರ್ವ ಗರ್ಭಿಣಿ ಇಂಜೆಕ್ಷನ್ ತೆಗೆದುಕೊಳ್ಳಲು ಪತಿ ಜೊತೆಗೆ ಕೆ. ಸಿ. ಜನರಲ್ ಆಸ್ಪತ್ರೆಗೆ ಆಗಮಿಸಿದ್ದರು. ಆಸ್ಪತ್ರೆಯಲ್ಲಿ ಆಧಾರ್ ಪರಿಶೀಲನೆ ವೇಳೆ ಗರ್ಭಿಣಿಗೆ ಬಾಲ್ಯ ವಿವಾಹವಾಗಿರುವುದು ವೈದ್ಯರಿಗೆ ತಿಳಿದಿದೆ.
ಶೇಷಾದ್ರಿಪುರಂ ಪೊಲೀಸರಿಗೆ ವೈದ್ಯರು ಈ ಮಾಹಿತಿಯನ್ನು ನೀಡಿದ್ದಾರೆ. ವೈದ್ಯರ ಮಾಹಿತಿ ಮೇರೆ ಆಸ್ಪತ್ರೆಗೆ ತೆರಳಿದ ಪೊಲೀಸರು ಮಧ್ಯಾಹ್ನ 2 ಗಂಟೆಗೆ ಗರ್ಭಿಣಿ ಮತ್ತು ಆಕೆಯ ಪತಿಯನ್ನು ಠಾಣೆಗೆ ಕರೆತಂದು ಕೂರಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು| 2 ಅಂತಸ್ತಿನ ಮನೆ ಕುಸಿತ
ರಾತ್ರಿ 10 ಗಂಟೆಯಾದರೂ ಗರ್ಭಿಣಿಯನ್ನು ಠಾಣೆಯೊಳಗೆ ಕೂರಿಸಿಕೊಂಡಿದ್ದಾರೆ. ನಿಯಮದ ಪ್ರಕಾರ 6 ಗಂಟೆಯೊಳಗೆ ಮಹಿಳೆಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಬೇಕು.
ಆದರೆ, ರಾತ್ರಿ 10 ಗಂಟೆವರೆಗೆ ಸಿಬ್ಬಂದಿ ಠಾಣೆಯಲ್ಲಿಯೇ ಇರಿಸಿಕೊಂಡಿದ್ದಾರೆ. ವಿಚಾರ ತಿಳಿದು ಮಾಧ್ಯಮದವರು ಠಾಣೆಗೆ ಹೋಗುತ್ತಿದ್ದಂತೆ ಠಾಣಾ ಸಿಬ್ಬಂದಿ ಗರ್ಭಿಣಿಯನ್ನು ಸಖಿ ಕೇಂದ್ರಕ್ಕೆ ಕಳುಹಿಸಿದ್ದಾರೆ. ಪೊಲೀಸರು ಮಾನವೀಯತೆಯನ್ನೇ ಮರೆತರಾ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಇದನ್ನೂ ನೋಡಿ: ಡಾ. ಬಂಜಗೆರೆ ಜಯಪ್ರಕಾಶ್ ಜೊತೆ ಸಂವಾದ Janashakthi Media