ಕಲಬುರಗಿ| ಮೃತಪಟ್ಟ ವ್ಯಕ್ತಿಯ ದೇಹವನ್ನು ದರದರನೇ ಎಳೆದುಕೊಂಡು ಹೋದ ಸಿಮೆಂಟ್‌ ಕಂಪನಿ ಸಿಬ್ಬಂದಿ

ಕಲಬುರಗಿ: ಸಿಬ್ಬಂದಿ ಓರ್ವ ಕರ್ತವ್ಯನಿರತ ವೇಳೆ ಹೃದಯಾಘಾತದಿಂದ ಮೃತಪಟ್ಟ ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಗ್ರಾಮದಲ್ಲಿನ ಶ್ರೀ ಸಿಮೆಂಟ್ ಕಂಪನಿಯಲ್ಲಿ ನಡೆದಿದ್ದೂ, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸಾಕಷ್ಟು ಆಕ್ರೋಶ ವ್ಯಕ್ತವಾಗಿದೆ.

ಮೃತರನ್ನು ಬಿಹಾರ ಮೂಲದ ಚಂದನಸಿಂಗ್ (35) ಎಂದು ಗುರುತಿಸಲಾಗಿದೆ. ಚಂದನಸಿಂಗ್ ಶ್ರೀ ಸಿಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಕರ್ತವ್ಯನಿರತ ವೇಳೆ ಲೋ ಬಿಪಿಯಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಆನಂದ ವಿಕಟನ್ ವೆಬ್‌ಸೈಟ್ ಮೇಲಿನ ನಿರ್ಬಂಧ: ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಸರ್ವಾಧಿಕಾರಿ ದಾಳಿ

ಮೃತ ಕಾರ್ಮಿಕ ಚಂದನಸಿಂಗ್​ ತದೇಹವನ್ನು ಸಿಬ್ಬಂದಿ ದರದರನೇ ಎಳೆದುಕೊಂಡು ಹೋಗಿದ್ದಾರೆ. ಶ್ರೀ ಸಿಮೆಂಟ್ ಕಂಪನಿ ಆಡಳಿತ ಮಂಡಳಿ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇಡಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸೇಡಂ ಪೊಲೀಸರು, 6 ಮಂದಿ ಕಾರ್ಮಿಕರನ್ನು ಬಂಧಸಿದ್ದಾರೆ. ಆರೋಪಿಗಳಾದ ಹೈದರ್ ಅಲಿ, ರವಿಶಂಕರ್, ಹರಿಂದರ್ ನಿಶಾದ್, ಅಜಯ್, ರಮೇಶಚಂದ್ರ ಅಖಿಲೇಶ್‌ ಬಂಧಿತ ಆರೋಪಿಗಳು.

ಬಿಎನ್​ಎಸ್​ ಕಾಯ್ದೆಯ 129(ಇ) ಮತ್ತು 129(ಡಿ) ಅಡಿ ಕೇಸ್ ದಾಖಲಾಗಿದೆ. ಬಂಧಿತ 6 ಮಂದಿ ಕಾರ್ಮಿಕರನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ‌ಒಪ್ಪಿಸಿದ್ದಾರೆ.

ಇದನ್ನೂ ನೋಡಿ: SCSP/TSP ಯೋಜನೆಯ ದುರ್ಬಳಕೆ: ಈ ದಶಕದ ವಂಚನೆ Janashakthi Media |SCSP/TS |ವಾರದ ನೋಟ

Donate Janashakthi Media

Leave a Reply

Your email address will not be published. Required fields are marked *