ಕಾಂಗ್ರೆಸ್ ಸರಕಾರ ಬಂದಿದೆ ಕರೆಂಟ್ ಬಿಲ್ ಕಟ್ಟಲ್ಲ ಎಂದ ಗ್ರಾಮಸ್ಥರು

ಚಿತ್ರದುರ್ಗ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.‌ ನಾವು ವಿದ್ಯುತ್ ಬಿಲ್ ಪಾವತಿಸುವುದಿಲ್ಲ ಎಂದು ಗ್ರಾಮಸ್ಥರು ಹೇಳಿರುವ ವಿಡಿಯೊ ಸಾಮಾಜಿಕ‌ ಜಾಲತಾಣದಲ್ಲಿ ಹರಿದಾಡಿದೆ. ತಾಲ್ಲೂಕಿನ‌ ಜಾಲಿಕಟ್ಟೆ ಗ್ರಾಮಕ್ಕೆ ಸೋಮವಾರ ಎಪ್ರಿಲ್ ತಿಂಗಳ ವಿದ್ಯುತ್ ಬಿಲ್ ಪಾವತಿ ಸಂಗ್ರಹಕ್ಕೆ ಸಿದ್ದಾಪುರ ಗ್ರಾಮ ಪಂಚಾಯತಿಯ ಗ್ರಾಮ ವಿದ್ಯುತ್ ಪ್ರತಿನಿಧಿ ಗೋಪಿ ತೆರಳಿದ್ದಾರೆ. ಈ ವೇಳೆ ಗ್ರಾಮಸ್ಥರು ‘ವಿದ್ಯುತ್ ಉಚಿತ ಎಂದು ಘೋಷಿಸಿದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆ ಕಾರಣಕ್ಕೆ ನಾವು ಹಣ ಪಾವತಿಸುವುದಿಲ್ಲ’ ಎಂದು ತಿಳಿಸಿದ್ದಾರೆ.

ಆದೇಶ ಬರುವವರೆಗೂ ಹಣ ಪಾವತಿಸಬೇಕೆಂದು ಗ್ರಾಮ ವಿದ್ಯುತ್ ಪ್ರತಿನಿಧಿ ವಿವರಿಸಿದ್ದಾರೆ. ಮಾತಿಗೆ ಜಗ್ಗದ ಗ್ರಾಮಸ್ಥರು ‘ಆದೇಶದ ಬಗ್ಗೆ ಕಾಂಗ್ರೆಸ್ ನವರಿಗೇ ಕೇಳಿ. ಗ್ರಾಮದಲ್ಲಿ ಯಾರು ಈ ತಿಂಗಳಿನಿಂದ ಹಣ ಪಾವತಿಸುವುದಿಲ್ಲ’ ಎಂದು ಹೇಳಿ ಕಳುಹಿಸಿದ್ದಾರೆ.

ಘಟನೆಯನ್ನು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್( ಗ್ರಾಮಾಂತರ) ಕಿರಣ್ ರೆಡ್ಡಿ ಖಚಿತ ಪಡಿಸಿದ್ದು, ‘ ಸರ್ಕಾರದ ಆದೇಶ ಬರುವ ತನಕ ವಿದ್ಯುತ್ ಹಣ ಪಾವತಿಸಬೇಕು’ ಎಂದು ಸ್ಪಷ್ಟಪಡಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *