ಹಾಸನ: ವೀಕ್ಷಿತಾ ಮತ್ತು ಲೋಕಕಿರಣ್ ಇಬ್ಬರೂ ಜೂನ್ 12ರಂದು ಗುರುವಾರ ಹಾಸನದ ಪಾಲಿಕ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಅಂತರ್ ಜಾತಿ ಸರಳ ವಿವಾಹ ಸಮಾರಂಭದಲ್ಲಿ ‘ಮನಸ್ಸಾಕ್ಷಿ ಮದುವೆ’ ಪ್ರಮಾಣವಚನ ಸ್ವೀಕರಿಸುವ ಮೂಲಕ ತಮ್ಮ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮನಸ್ಸಾಕ್ಷಿ
ಚನ್ನರಾಯಪಟ್ಟಣ ಮೂಲದ ವೀಕ್ಷಿತ ಮತ್ತು ಹಾಸನದ ಲೋಕಕಿರಣ್ ಪರಸ್ಪರ ಪ್ರೇಮಿಸುತ್ತಿದ್ದು, ಬಾಳ ಸಂಗಾತಿಗಳಾಗಲು ನಿಶ್ಚಯಿಸಿ ಅಂತರ್ ಜಾತಿ ‘ಸರಳ ವಿವಾಹವಾಗುವ’ ಮೂಲಕ ತಮ್ಮ ದಾಂಪತ್ಯ ಜೀವನಕ್ಕೆ ಕಾಲಿಡಲು ತೀರ್ಮಾನಿಸಿದ್ದರು.
ಈ ಸರಳ ಮದುವೆ ಸಮಾರಂಭದಲ್ಲಿ ವಧು ವರಿಬ್ಬರಿಗು ಲೇಖಕಿ, ಸಾಮಾಜಿಕ ಕಾರ್ಯಕರ್ತೆ ರೂಪಾ ಹಾಸನ ‘ಮನಸ್ಸಾಕ್ಷಿ ಮದುವೆ ಪ್ರಮಾಣ ವಚನ’ ಬೋಧಿಸುವ ಮೂಲಕ ಶುಭ ಹಾರೈಸಿ ಮಾತನಾಡಿದರು.
ಇದನ್ನೂ ಓದಿ: ಇನ್ನು ಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಡೇವಿಡ್ ವಾರ್ನರ್
ಸಂಸ್ಕೃತಿ ಚಿಂತಕರಾದ ಪ್ರೊ. ಕಾಳೆಗೌಡ ನಾಗಾವರ ಮಾತನಾಡಿ, ಇಂತಹ ಸರಳ ಮದುವೆಗಳು ಹೆಚ್ಚಾಗಿ ಎಲ್ಲರಿಗೂ ಮಾದರಿಯಾಗಬೇಕೆ ವಿನಹ, ದುಬಾರಿ ವೆಚ್ಚದ ಆಡಂಬರದ ಮದುವೆ ಸಮಾರಂಭಗಳು ಸಮಾಜದಲ್ಲಿ ಅಸಮಾನತೆಗಳನ್ನು ಸೃಷ್ಟಿಸುತ್ತವೆ ಎಂದರು.
ಸಿಪಿಐ(ಎಂ) ಮುಖಂಡ ಧರ್ಮೇಶ್ ಮಾತನಾಡಿ ಸಮಾಜದಲ್ಲಿ ಇಂತಹ ಅಂತರ್ ಜಾತಿ ವಿವಾಹಗಳು ಹೆಚ್ಚಾಗಬೇಕು. ಪ್ರಜ್ಙಾವಂತರಾದ ನಾವುಗಳು ಮತ್ತು ಸಮಾಜ ಅವರೊಂದಿಗೆ ಬೆಂಬಲವಾಗಿ ನಿಂತು ಅವರಲ್ಲಿ ಬದುಕಿನ ಭರವಸೆ ಮೂಡಿಸಬೇಕಿದೆ. ಸಮಾಜದಲ್ಲಿ ಮಾತ್ರವಲ್ಲದೆ ದಾಂಪತ್ಯ ಕುಟುಂಬದಲ್ಲಿಯೂ ಗಂಡು-ಹೆಣ್ಣು ಮೇಲುಕೀಳು ಭಾವನೆ ಇರದೆ, ಕುಂಟುಬದಲ್ಲಿಯು ಪ್ರಜಾಪ್ರಭುತ್ವ ನೆಲೆಸಬೇಕಿದೆ.
ಪ್ರೀತಿಸಿ ಮದುವೆಯಾದವರು ಅತ್ಯಂತ ಜವಾಬ್ದಾರಿಯಿಂದ ಮಾದರಿಯಾಗಿ ಬದುಕಬೇಕೆಂದರು. ಅಂತರಾಷ್ಟ್ರೀಯ ಚಿತ್ರಕಲಾವಿರಾದ ಕೆ.ಟಿ ಶಿವಪ್ರಸಾದ್., ಮಹದೇವಮ್ಮ ಮತ್ತು ಸರೋಜಮ್ಮ ವೇದಿಕೆಯಲ್ಲಿ ಉಪಸ್ಥಿತರಿದ್ದರು .
ಲೋಕಕಿರಣ್ ತಂದೆ, ಸಾಹಿತಿಗಳಾದ ಹರೀಶ್ ಕಟ್ಟೆ ಬೆಳಗುಲಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಡಿವೈಎಫ್ಐ ಪೃಥ್ವಿ ಎಂ.ಜಿ ನಿರ್ವಹಿಸಿದರು. ಸಾಹಿತಿ, ಜ.ನಾ ತೇಜಶ್ರಿ, ದಲಿತ ಮುಖಂಡರಾದ ಕೃಷ್ಣದಾಸ್, ಎಂ.ಬಿ ಪುಟ್ಟಸ್ವಾಮಿ, ಡಾ. ಸೋಮಣ್ಣ ಸೇರಿದಂತೆ ಅನೇಕರು ವಧು-ವರರಿಗೆ ಶುಭ ಹಾರೈಸಿ ಮಾತನಾಡಿದರು. ಡಾ.ಹಂಪನಹಳ್ಳಿ ತಿಮ್ಮೇಗೌಡ, ಡಾ. ಜಯಶಂಕರ್ ಹಲಗೂರ್, ಎಚ್.ಕೆ ಸಂದೇಶ್, ಟಿ.ಆರ್ ವಿಜಯ್ ಕುಮಾರ್ ಸೇರಿದಂತೆ ಹಲವು ಗಣ್ಯರು, ಸಂಬಂಧಿಕರು ಮದುವೆಯಲ್ಲಿ ಭಾಗವಹಿಸಿ ಸಾಕ್ಷಿಯಾದರು.
ಇದನ್ನೂ ನೋಡಿ: ಚರ್ಚೆ | ತ್ಯಾಗದ ಹಬ್ಬ ಬಕ್ರೀದ್- ಆಹಾರ ರಾಜಕಾರಣ – ಸೈಯದ್ ಶಫಿವುಲ್ಲಾ ಮತ್ತು ಕೆ ಎಸ್ ವಿಮಲಾ ಮಾತುಕತೆJanashakthi