ಬಿಜಾಪುರ| ಭದ್ರತಾ ಪಡೆಗಳ ಮುಂದೆ ಶರಣಾದ ಮೂವರು ನಕ್ಸಲರು

ಬಿಜಾಪುರ: ಜೂನ್‌ 12 ಗುರುವಾರದಂದು ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಮೂವರು ನಕ್ಸಲರು ಭದ್ರತಾ ಪಡೆಗಳ ಮುಂದೆ ಶರಣಾಗಿದ್ದಾರೆ . ಮೂವರು ನಕ್ಸಲರಿಗೆ ಒಟ್ಟಾರೆ ₹19 ಲಕ್ಷ ಇನಾಮು ಘೋಷಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್‌ 2ರಂದು ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ 16 ನಕ್ಸಲರು ಪೊಲೀಸರಿಗೆ ಶರಣಾಗಿದ್ದರು. ಬಿಜಾಪುರ

ಇದನ್ನೂ ಓದಿ: ರಾಜ್ಯದಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ! 9 ಜಿಲ್ಲೆಗಳಿಗೆ ರೆಡ್ ಅಲರ್ಟ್

ಈ ಪೈಕಿ 6 ನಕ್ಸಲರ ಸುಳಿವು ಕೊಟ್ಟವರಿಗೆ ಒಟ್ಟು ₹25 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಇದಾದ ಒಂದು ವಾರದ ಬಳಿಕ ಈ ಬೆಳವಣಿಗೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

16 ನಕ್ಸಲರ ಪೈಕಿ ಒಂಬತ್ತು ನಕ್ಸಲರು ಕೆರ್ಲಪೆಂಡ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು, ಅವರ ಶರಣಾಗತಿಯ ಮೂಲಕ ಗ್ರಾಮವು ನಕ್ಸಲ್ ಮುಕ್ತವಾಗಿದೆ. ಸರ್ಕಾರದ ₹1 ಕೋಟಿ ಅನುದಾನ ಪಡೆಯಲು ಅರ್ಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ: ಶಾಂತಿಯ ನಡಿಗೆ ಮಂಗಳೂರಿನ ಕಡೆಗೆ – ಸಮಾನ ಮನಸ್ಕರ ನಿರ್ಧಾರ Janashakthi Media

Donate Janashakthi Media

Leave a Reply

Your email address will not be published. Required fields are marked *