ಮದ್ಯ ಸೇವಿಸಿ ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದ ರೈಲು, ಮೂವರು ಸಾವು

ಗಂಗಾವತಿ: ಹಳಿಯ ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದ ಮೂವರು ಯುವಕರ ಮೇಲೆ ರೈಲು ಹರಿದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೇ ಮಾರ್ಗದಲ್ಲಿ ಸಂಭವಿಸಿದೆ.

ಗುರುವಾರ ರಾತ್ರಿ ಹತ್ತು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಗಂಗಾವತಿಯ ಚಿಕ್ಕ ಜಂತಕಲ್ ನ ಮೌನೇಶ ಪತ್ತಾರ (23), ಸುನೀಲ (23) ಹಾಗೂ ವೆಂಕಟ ಭೀಮನಾಯ್ಕ (20) ಮೃತಪಟ್ಟವರು.

ಈ ಮೂವರು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲ್ವೇ ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ ಈ ಸಂದರ್ಭದಲ್ಲಿ ಹುಬ್ಬಳ್ಳಿ ಕಡೆಯಿಂದ ಆಗಮಿಸಿದ ರೈಲು ಮೂವರ ಮೇಲೆಯೇ ಹರಿದಿದ್ದು ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಸರ್ಕಾರ ಪತನಗೊಳಿಸುವ ಪ್ರಯತ್ನ ನಡೆಯುತ್ತಿದೆ : ಸಚಿವರ ಆರೋಪ

ರೈಲಿನ ರಭಸಕ್ಕೆ ಮೃತದೇಹಗಳು ಹಳಿಯ ಮೇಲೆಯೇ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಹಾಗೂ ಕೆಲವು ತಿಂಡಿ ಪಾಕೇಟ್ ಗಳಿದ್ದವು ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ರೈಲ್ವೇ ಇಲಾಖೆಯ ಪಿಎಸ್‌ಐ ಬಿ.ಎನ್.ರಾಮಣ್ಣ ನೇತೃತ್ವದ ರೈಲ್ವೇ ಪೊಲೀಸ್ ತಂಡ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಇದನ್ನೂ ನೋಡಿ: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಧೇಯಕದಲ್ಲಿ ಕೆಲ ಗೊಂದಲಗಳಿವೆ – ಸಿಎಂ ಸಿದ್ದರಾಮಯ್ಯJanashakthi Media

Donate Janashakthi Media

Leave a Reply

Your email address will not be published. Required fields are marked *