ಜಮ್ಮು: ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಒಂದು ಭಾಗ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿರುವ ದುರ್ಘಟನೆ ಜಮ್ಮುವಿನಲ್ಲಿ ನಡೆದಿದೆ. ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರ ಮೃತದೇಹಗಳನ್ನು ರಕ್ಷಣಾ ತಂಡಗಳು ಹೊರತೆಗೆದಿವೆ. ಜಮ್ಮು
ಈ ಘಟನೆ ಜಮ್ಮುವಿನ ಬಂಟಾಲಾಬ್ ಪ್ರದೇಶದ ತಠಾರ್ ಭಾಗದಲ್ಲಿ ಸಂಭವಿಸಿದೆ. ಸೇತುವೆ ಕಾಮಗಾರಿ ನಡೆಯುತ್ತಿರುವ ವೇಳೆ ಏಕಾಏಕಿ ಅದರ ಒಂದು ಭಾಗ ಕುಸಿದು ಹಲವು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡರು.
ಇದನ್ನೂ ಓದಿ : ಅಂಬೇಡ್ಕರ್ ಎಲ್ಲರಿಗೂ ನ್ಯಾಯ ತಂದ ಮಹಾನ್ ಚಿಂತಕ: ಅನಿಲ್ ಕುಮಾರ್ ಕಂಕನಾಡಿ
ಘಟನೆಯ ಬಳಿಕ ಸೇನೆ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯಾ ಪಡೆ (NDRF), ರಾಜ್ಯ ವಿಪತ್ತು ಪಡೆ (SDRF) ಹಾಗೂ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅವಶೇಷಗಳನ್ನು ತೆರವುಗೊಳಿಸಿ ಸಿಲುಕಿದ್ದವರನ್ನು ಹೊರತೆಗೆದುಕೊಳ್ಳಲು ಯತ್ನಿಸಲಾಯಿತು. ಜಮ್ಮು
ಮೊದಲು ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ಕ್ರಮೇಣ ರಕ್ಷಣಾ ಕಾರ್ಯಾಚರಣೆಯಲ್ಲಿ ಕೆಲವರನ್ನು ಹೊರತೆಗೆದ ನಂತರ ಮೂವರು ಕಾರ್ಮಿಕರು ಮೃತಪಟ್ಟಿರುವುದು ದೃಢಪಟ್ಟಿದೆ.
ಈ ದುರಂತದಿಂದ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅಪಘಾತದ ಕಾರಣ ಕುರಿತು ತನಿಖೆ ನಡೆಯುತ್ತಿದೆ.
ಇದನ್ನೂ ನೋಡಿ : ಮೇ ಡೇ ವಿಶೇಷ: ಕನಿಷ್ಠ ವೇತನ, ಹಕ್ಕುಗಳ ರಕ್ಷಣೆಗೆ ರಾಜ್ಯವ್ಯಾಪಿ ಕಾರ್ಮಿಕರ ಮೆರವಣಿಗೆ Janashakthi Media
