ತಿಡಿಗೋಳ : ರಥ ಮುಟ್ಟಿದ್ದಕ್ಕೆ ಪರಿಶಿಷ್ಟರಿಗೆ ಬಹಿಷ್ಕಾರ

ಸಿಂಧನೂರು: ದೇವರ ರಥ ಮುಟ್ಟಿದ ಕಾರಣಕ್ಕೆ ಪರಿಶಿಷ್ಟ ಜಾತಿಯ ಯುವಕರ ಮೇಲೆ ಲಿಂಗಾಯತ ಸಮುದಾಯದ ಯುವಕರು ಹಲ್ಲೆ ಮಾಡಿದ ಘಟನೆಯು ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಜರುಗಿದೆ.

ಈ ಘಟನೆಯು ಎರಡು ವಾರಗಳ ಹಿಂದೆ ನಡೆದಿದ್ದು, ಹಲವು ಬಾರಿ ಸಂಧಾನಕ್ಕೆ ಪ್ರಯತ್ನಿಸಿದರೂ ಗ್ರಾಮದಲ್ಲಿ ಪರಿಶಿಷ್ಟ ಜಾತಿಯವರ ಮೇಲೆ ಅಘೋಷಿತ ಬಹಿಷ್ಕಾರ ಕೊನೆಗೊಂಡಿಲ್ಲ ಎಂದು ತಿಳಿದು ಬಂದಿದೆ. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

‘ಗಿರಣಿ ಅಂಗಡಿಯಲ್ಲಿ ಹಿಟ್ಟು ಹಾಕುವುದಿಲ್ಲ, ಕಿರಾಣಿ ಅಂಗಡಿಯಲ್ಲಿ ವಸ್ತುಗಳನ್ನು ನೀಡುವುದಿಲ್ಲ, ಹೋಟೆಲ್‌ನಲ್ಲಿ ಚಹಾ ಕುಡಿಯಲು ಕೂಡ ನಿರ್ಬಂಧಿಸಲಾಗಿದೆ’ ಎಂದು ಪರಿಶಿಷ್ಟ ಜಾತಿಯವರು ಸಮಸ್ಯೆ ತೋಡಿಕೊಂಡರು. ಅಧಿಕಾರಿಗಳು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಬಿಗುವಿನ ಪರಿಸ್ಥಿತಿ ಹಾಗೆಯೇ ಇದೆ ಎನ್ನಲಾಗಿದೆ.

Donate Janashakthi Media

Leave a Reply

Your email address will not be published. Required fields are marked *