ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ; ರಾಜೀನಾಮೆ ನೀಡುವುದಾಗಿ ಎಚ್ಚರಿಸಿದ ಜೆಡಿಎಸ್‌ ಶಾಸಕ

ಯಾದಗಿರಿ : ಇತ್ತೀಚಿಗೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರು ನಮಗೆ ಗೌರವ ಸಿಗದ ಕಡೆಗೆ ನಾವು ಇರುವುದಿಲ್ಲ. ರಾಜೀನಾಮೆ ಕೊಡಲು ಸಿದ್ಧ ಎಂದು ಸ್ಪೋಟಕ ಹೇಳಿಕೆ ನೀಡಿದ್ದರು. ಇದೀಗ ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ಕೂಡ ಪೊಲೀಸರ ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ ರಾಜೀನಾಮೆ ನೀಡಲು ಸಿದ್ದ ಎಂದು ಎಚ್ಚರಿಕೆ ನೀಡಿದ್ದಾರೆ.

ಹೌದು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ ಜೆಡಿಎಸ್ ಶಾಸಕ ಶರಣಗೌಡ ಕುಂದಕೂರ್ ಪೊಲೀಸರ ಭ್ರಷ್ಟಾಚಾರದಿಂದ ಬೇಸತ್ತಿದ್ದೇವೆ. ರಾಜೀನಾಮೆ ನೀಡಲು ಸಿದ್ಧ ಎಂದು ಯಾದಗಿರಿ ಜಿಲ್ಲೆಯ ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಈ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲಿ ಸೇತುವೆಗಳ ಕುಸಿತ ಮುಂದುವರಿಕೆ

ಇಂದು ಜನಸ್ಪಂದನ ಕಾರ್ಯಕ್ರಮದಲ್ಲಿ ಕಂದಕೂರು ವಾರ್ನಿಂಗ್ ನೀಡಿದ್ದಾರೆ.ಯಾದಗಿರಿ ಜಿಲ್ಲೆಯ ಗುರುಮಠಕಲ್ ನಲ್ಲಿ ಜನಸ್ಪಂದನ ಕಾರ್ಯಕ್ರಮ ಸಭೆ ನಡೆದಿತ್ತು. ಪೊಲೀಸರಿಗೆ ಅಕ್ರಮ ದಂಧೆ ಬಗ್ಗೆ ಕರೆ ಮಾಡಿದರೆ ಹೇಳಲಿ, ಆದರೆ ವೈಯಕ್ತಿಕ ಕಲಸದ ಬಗ್ಗೆ ಹೇಳಿದರೆ ರಾಜೀನಾಮೆ ನೀಡುತ್ತೇವೆ. ಯಾದಗಿರಿ ಡಿಸಿ ಎಸ್ಟಿ ಎದರು ರಾಜೀನಾಮ ಮಾತುಗಳ ನಾಡಿದ್ದಾರ, ಈ ವೇಳೆ ಎಸ್ ಪಿ ಡಿ ವೈ ಎಸ್ ಪಿ ಗೆ ಶಾಸಕ ಶರಣಗೌಡ ಕಂದುಕೂರು ತರಾಟೆ ತೆಗೆದುಕೊಂಡರು.

ಪೊಲೀಸರು ಇದೇ ರೀತಿ ಅನ್ಯಾಯ, ಭ್ರಷ್ಟಾಚಾರ ಮುಂದುವರಿಸಿದರೆ ನಾನು ಸೀದಾ ಯಾನಾಗುಂದಿ ಮಾಣಿಕಮ್ಮಳ ಹತ್ತಿರ ಹೋಗಿ ರಾಜೀನಾಮೆ ಕೊಡುತ್ತೇನೆ. ಪೊಲೀಸರು ಬಡವರ ಪರ, ಅನ್ಯಾಯ, ದೌರ್ಜನ್ಯಕ್ಕೊಳಗಾದವರ ಪರ ಕೆಲಸ ಮಾಡಬೇಕು. ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡಬಾರದು ಜನರಿಗಾಗಿ ಒಳ್ಳೆಯ ಕೆಲಸ ಮಾಡಿ ಎಂದರು.

ಇದನ್ನೂ ನೋಡಿ: ಬಿಹಾರದಲ್ಲಿ ಸರಣಿ ಸೇತುವೆ ಕುಸಿತ : 15 ದಿನಗಳಲ್ಲಿ 10 ಕುಸಿತ ಪ್ರಕರಣ

 

Donate Janashakthi Media

Leave a Reply

Your email address will not be published. Required fields are marked *