ಗದಗ ಜಿಲ್ಲೆಯಲ್ಲಿ ಟೊಮೆಟೊ ಬೆಲೆಗಳು ದಿಢೀರ್ ಕುಸಿತ ಕಂಡಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ದಿನಗಳ ಹಿಂದೆ ಕೆಜಿಗೆ ₹30ಕ್ಕೆ ಮಾರಾಟವಾಗುತ್ತಿದ್ದ ಟೊಮೆಟೊ, ಈಗ ಎಪಿಎಂಸಿ ಮಾರುಕಟ್ಟೆಯಲ್ಲಿ ಕೇವಲ ₹2ಕ್ಕೆ ಮಾರಾಟವಾಗುತ್ತಿದೆ.
ಈ ಬೆಲೆ ಕುಸಿತಕ್ಕೆ ಪೂರ್ವ ಮುಂಗಾರು ಮಳೆಯ ಪರಿಣಾಮ ಮತ್ತು ರಾಜ್ಯದ ವಿವಿಧ ಭಾಗಗಳಲ್ಲಿ ಟೊಮೆಟೊ ಬೆಳೆಗಾರರ ಸಂಖ್ಯೆಯಲ್ಲಿ ಹೆಚ್ಚಳ ಕಾರಣವಾಗಿದೆ. ಹಾಗೆಯೇ, ಬಿಸಿಲ ವಾತಾವರಣದಿಂದಾಗಿ ಹಣ್ಣುಗಳು ಬೇಗನೆ ಹಣ್ಣಾಗುತ್ತಿದ್ದು, ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರವೇಶಿಸುತ್ತಿವೆ. ಇದರಿಂದಾಗಿ ಬೇಡಿಕೆ ಕಡಿಮೆಯಾಗಿ, ಬೆಲೆಗಳು ತೀವ್ರವಾಗಿ ಕುಸಿದಿವೆ.
ಇದನ್ನು ಓದಿ : ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ!
ಬೆಲೆ ಕುಸಿತದಿಂದ ನಷ್ಟ ಅನುಭವಿಸುತ್ತಿರುವ ರೈತರು ಎಪಿಎಂಸಿ ಅಂಗಡಿ ಮಾಲೀಕರ ವಿರುದ್ಧ ಪ್ರತಿಭಟನೆ ನಡೆಸಿ, ಸರ್ಕಾರದಿಂದ ಟೊಮೆಟೊಗೆ ಬೆಂಬಲ ಬೆಲೆ ಘೋಷಣೆಯ ಆಗ್ರಹಿಸಿದ್ದಾರೆ. ಅಧಿಕಾರಿಗಳು ಈ ವಿಷಯದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
ಇನ್ನು ಕೆಲ ರೈತರು ತಮ್ಮ ಬೆಳೆಗಳನ್ನು ಸ್ಥಳೀಯ ಅಂಗಡಿಗಳಲ್ಲಿ ಸ್ವತಃ ಮಾರಾಟ ಮಾಡಲು ನಿರ್ಧರಿಸಿದ್ದಾರೆ, ಏಕೆಂದರೆ ಅಲ್ಲಿನ ಬೆಲೆಗಳು ಇನ್ನೂ ಕೆಜಿಗೆ ₹20ರಷ್ಟಿವೆ. ಸಗಟು ವ್ಯಾಪಾರಿಗಳು ಟೊಮೆಟೊದ ಗುಣಮಟ್ಟ ಮತ್ತು ಗಾತ್ರಕ್ಕೆ ಅನುಗುಣವಾಗಿ ಬೆಲೆ ನಿಗದಿ ಮಾಡುತ್ತಿರುವುದರಿಂದ, ರೈತರಿಗೆ ಕಡಿಮೆ ಬೆಲೆ ಸಿಗುತ್ತಿದೆ ಎಂಬ ಆರೋಪವಿದೆ.
ರೈತ ಪ್ರಕಾಶ್ ಬೀರನೂರ್ ಅವರು ತಮ್ಮ ಅನುಭವವನ್ನು ಹಂಚಿಕೊಂಡು, 300 ಟ್ರೇ ಟೊಮೆಟೊಗಳನ್ನು ಮಾರಾಟ ಮಾಡಿ ಕೇವಲ ₹1,500 ಮಾತ್ರ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿ ಟ್ರೇನಲ್ಲಿ 25 ಕೆಜಿ ಟೊಮೆಟೊ ಇರುತ್ತದೆ, ಅಂದರೆ ಪ್ರತಿ ಕೆಜಿಗೆ ಕೇವಲ ₹2 ಸಿಕ್ಕಿದೆ. ಸಸಿ ನೆಡುವುದು, ಗೊಬ್ಬರ ಸಿಂಪಡಿಸುವುದು, ಕಾರ್ಮಿಕರಿಗೆ ವೇತನ ನೀಡುವುದು ಮತ್ತು ವರ್ಗಾವಣೆ ಶುಲ್ಕ ಪಾವತಿಸುವುದು ಸೇರಿದಂತೆ ಎಲ್ಲಾ ಖರ್ಚುಗಳನ್ನು ಭರಿಸುವಲ್ಲಿ ರೈತರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ.
ಈ ಪರಿಸ್ಥಿತಿಯಲ್ಲಿ, ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು, ಟೊಮೆಟೊ ಬೆಳೆಗಾರರಿಗೆ ಬೆಂಬಲ ಬೆಲೆ ಘೋಷಿಸಿ, ಅವರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಸಹಾಯ ಮಾಡಬೇಕಾಗಿದೆ. ಇದು ರೈತರ ಜೀವನಮಾನವನ್ನು ಉತ್ತಮಗೊಳಿಸುವಲ್ಲಿ ಮತ್ತು ಕೃಷಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ.
ಇದನ್ನು ಓದಿ : ಹಣದುಬ್ಬರದ ಅಡಿಯಲ್ಲಿ ನರಳುತ್ತಿರುವವರ ಮೇಲೆ ಈಗ ಅನಿಲ ಸಿಲಿಂಡರ್ಗಳ ಬೆಲೆ ಏರಿಕೆಯ ಹೊರೆ – ಪ್ರತಿಭಟಿಸಲು ಸಿಪಿಐ(ಎಂ) ಕರೆ