ಬೆಂಗಳೂರು: ಮೇ 29 ಗುರುವಾರದಿಂದ ನಿಲುಗಡೆ ನಿಷೇಧಿತ ಸ್ಥಳಗಳಲ್ಲಿ ನಿಲ್ಲಿಸುವ ವಾಹನಗಳನ್ನು ಕೊಂಡೊಯ್ಯುವ ‘ಟೋಯಿಂಗ್’ ಕಾರ್ಯಾಚರಣೆ ಆರಂಭವಾಗಿದ್ದೂ, ಅಧಿಕೃತ ಆದೇಶ ಹೊರಬೀಳುವ ಮುನ್ನವೇ ಕಾರ್ಯಾಚರಣೆ ಶುರುವಾಗಿದೆ.
ಸಂಚಾರ ನಿಯಮ ಉಲ್ಲಂಘಿಸಿದ ವಾಹನಗಳನ್ನು ಟೋಯಿಂಗ್ ಮಾಡುವ ಸಂಬಂಧ ನಿಯಮಾವಳಿ ರೂಪಿಸಲಾಗುತ್ತಿದೆ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿಕೆ ನೀಡಿ 24 ತಾಸು ಕಳೆಯುವಷ್ಟರಲ್ಲಿ ಆಡುಗೋಡಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಟೋಯಿಂಗ್ ಕಾರ್ಯಾಚರಣೆ ನಡೆದಿದೆ.
ಇದನ್ನೂ ಓದಿ: ಕನ್ನಡದ ಖ್ಯಾತ ಸಾಹಿತಿ ಡಾ.ಎಚ್.ಎಸ್.ವೆಂಕಟೇಶ್ ಮೂರ್ತಿ ನಿಧನ
ಮೊದಲ ದಿನ 30ಕ್ಕೂ ಹೆಚ್ಚು ಪ್ರಕರಣ ದಾಖಲು ಮಾಡಲಾಗಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
‘ಟೋಯಿಂಗ್ಗೆ ಇಲಾಖೆಯ ವಾಹನಗಳನ್ನೇ ಬಳಸಬೇಕಾ ಅಥವಾ ಗುತ್ತಿಗೆದಾರರನ್ನು ನೇಮಿಸಬೇಕೆ ಎಂಬುದು ಇನ್ನೂ ತೀರ್ಮಾನವಾಗಿಲ್ಲ. ಶೀಘ್ರದಲ್ಲೇ ಅದರ ರೂಪುರೇಷೆಗಳು ಸಿದ್ಧವಾಗಲಿವೆ. ಟೋಯಿಂಗ್ ಜಾರಿ ದಿನಾಂಕ ಇನ್ನೂ ನಿಗದಿ ಆಗಿಲ್ಲ’ ಎಂದು ದಯಾನಂದ ಹೇಳಿದ್ದರು.
ಇದನ್ನೂ ನೋಡಿ: ಬಾನು ಮುಷ್ತಾಕ್ಗೆ ಬೂಕರ್ ಪ್ರಶಸ್ತಿ | ಮೂಲಭೂತವಾದಿಗಳಿಗೆ ಕಪಾಳಮೋಕ್ಷ – ಕೆ.ವಿ.ಪ್ರಭಾಕರ್ Janashakthi Media