ಬೆಂಗಳೂರು: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಮೇ 21ರ ಬೆಳಿಗ್ಗೆ 7ರಿಂದ ಸಂಜೆ 4ರವರೆಗೆ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗ ಬದಲಾವಣೆಗಳನ್ನು ಘೋಷಿಸಿದ್ದಾರೆ. ಪ್ರತಿಭಟನೆ
ಮೈಸೂರು ಬ್ಯಾಂಕ್ ವೃತ್ತದಿಂದ ಕೆಜಿ ರಸ್ತೆ ಮೂಲಕ ಫ್ರೀಡಂ ಪಾರ್ಕ್ ಕಡೆಗೆ ತೆರಳುವ ವಾಹನಗಳು ಬಲಕ್ಕೆ ತಿರುಗಲು ಪ್ಯಾಲೆಸ್ ಕ್ರಾಸ್ ರಸ್ತೆಯ ಮಹಾರಾಣಿ ಅಂಡರ್ಪಾಸ್ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ.
ಫ್ರೀಡಂ ಪಾರ್ಕ್ ಜಂಕ್ಷನ್ ಮತ್ತು ಕನಕದಾಸ ವೃತ್ತ ನಡುವೆ ಎರಡು ದಿಕ್ಕಿನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅನುಮತಿ ಇರುವುದಿಲ್ಲ.
ಇದನ್ನೂ ಓದಿ: ಕಾನ್ಪುರ ಬಿಸ್ಕಟ್ ಕಾರ್ಖಾನೆಯಲ್ಲಿ ಕಾರ್ಮಿಕರ ಆಕ್ರೋಶ: ವೇತನ ಹೆಚ್ಚಳ, ಉದ್ಯೋಗ ಭದ್ರತೆಗೆ ಆಗ್ರಹ
ಖೋಡೆ ಜಂಕ್ಷನ್ನಿಂದ ಕೆಆರ್ ವೃತ್ತದತ್ತ ಸಾಗುವವರು, ರೈಲು ನಿಲ್ದಾಣದಿಂದ ಫ್ಲೈಓವರ್ ಮೂಲಕ ಪ್ರತಿಭಟನಾಕಾರರು ಸಾಗುವ ಸಾಧ್ಯತೆ ಇರುವುದರಿಂದ, ಓಲ್ಡ್ ಜೆಡಿಎಸ್ ಕಚೇರಿ ರಸ್ತೆಯನ್ನು ಬಳಸುವಂತೆ ಸೂಚಿಸಲಾಗಿದೆ.
ಸುಬ್ಬಣ್ಣ ಜಂಕ್ಷನ್ನಿಂದ ಎಂಟಿಆರ್ ಜಂಕ್ಷನ್ವರೆಗೆ ಇರುವ ಏಕಮಾರ್ಗ ರಸ್ತೆಯನ್ನು ತಾತ್ಕಾಲಿಕವಾಗಿ ದ್ವಿಮಾರ್ಗ ರಸ್ತೆಯಾಗಿ ಪರಿವರ್ತಿಸಲಾಗಿದೆ. ಗಾಂಧಿನಗರದತ್ತ ಸಾಗುವ ವಾಹನಗಳು ಈ ಮಾರ್ಗವನ್ನು ಬಳಸಬಹುದು.
ಖೋಡೆ ಜಂಕ್ಷನ್ನಿಂದ ಮಹಾರಾಣಿ ಜಂಕ್ಷನ್ವರೆಗೆ, ವಿ. ರಾಮಚಂದ್ರ ರಸ್ತೆ, ಕಾಲಿದಾಸ ರಸ್ತೆ, ಪ್ಯಾಲೆಸ್ ರಸ್ತೆ ಹಾಗೂ ಕೆಜಿ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ನಿಷೇಧಿಸಲಾಗಿದೆ.
ಇದನ್ನೂ ನೋಡಿ: ಪಿಚ್ಚರ್ ಪಯಣ – 173| ಸಿನಿಮಾ – ಸಿರಾತ್, ʼಹುಡುಕಾಟದ ಗುಂಗಿನ ಸ್ಥಾಯಿ ಭಾವ ‘ Janashakthi Media
