ವರ್ಗಾವಣೆ ದಂಧೆಗೆ ಕಡಿವಾಣ ಹಾಕಬೇಕಿದೆ: ಬಸವರಾಜ ರಾಯರಡ್ಡಿ

ಕೊಪ್ಪಳ: ರಾಜ್ಯದಲ್ಲಿ ವರ್ಗಾವಣೆ ದಂಧೆ ಜೋರಾಗಿದೆ. ಇದಕ್ಕೆ ಕಡಿವಾಣ ಹಾಕಬೇಕಿದೆ ಎಂದು ರಾಜ್ಯ ಸರಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿದ್ದು,  ಇದು ಸಂಚಲನ ಸೃಷ್ಟಿಸಿದೆ.

ಸರಕಾರಿ ನೌಕರರ ವರ್ಗಾವಣೆಯಲ್ಲಿ ಹಣದ ವಹಿವಾಟು ಕಡಿಮೆಯಾಗಬೇಕಿದೆ. ಶಾಸಕ, ಸಂಸದರು ಹಾಗೂ ಸಚಿವರು ಅಧಿ ಕಾರಿಗಳನ್ನು ಬಳಸಿಕೊಂಡು ಅಥವಾ ಹಣದ ಮೂಲಕ ತಮ್ಮ ಕೆಲಸವನ್ನು ಮಾಡಿಸಿಕೊಳ್ಳುತ್ತಿದ್ದಾರೆ.

ಇದರಿಂದ ಜನಪರ ಕೆಲಸಗಳಿಗೆ ಹೊಡೆತ ಬೀಳುತ್ತಿದೆ. ಹೀಗಾಗಿ ವರ್ಗಾವಣೆ ದಂಧೆಗೆ ಕಡಿವಾಣ ಹಾಕಲು ಎಲ್ಲ ಇಲಾಖೆಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡುವ ವ್ಯವಸ್ಥೆ ಜಾರಿಯಾಗಬೇಕಿದೆ ಎಂದರು.

ಇದನ್ನೂ ಓದಿ: ಎಲ್ಲರೊಂದಾಗುವುದೇ ನಿಜವಾದ ಮನುಷ್ಯ ಧರ್ಮ – ಆರ್.ಜಿ. ಹಳ್ಳಿ ನಾಗರಾಜ

ಈಗಾಗಲೇ ಶಿಕ್ಷಣ ಇಲಾಖೆಯಲ್ಲಿ ಶಿಕ್ಷಕರ ವರ್ಗಾವಣೆಯಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಅದರಂತೆ ಹೆಚ್ಚು ಹಣ ವರ್ಗಾವಣೆಯಾಗುವ ಇಲಾಖೆಗಳಲ್ಲಿ ಇದೇ ರೀತಿ ಕೌನ್ಸೆಲಿಂಗ್‌ ಮೂಲಕ ಅಧಿಕಾರಿಗಳನ್ನು ವರ್ಗಾಯಿಸಬೇಕೆಂಬ ಚಿಂತನೆ ನಡೆದಿದೆ.

ಮೊದಲ ಹಂತದಲ್ಲಿ ಅಬಕಾರಿ, ಲೋಕೋಪಯೋಗಿ ಇಲಾಖೆಯಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಆರಂಭಿಸಲು ಸಿಎಂಗೆ ಸಲಹೆ ನೀಡಿದ್ದೇನೆ.

ನನಗೇನಾದರೂ ಮುಂದಿನ ದಿನಗಳಲ್ಲಿ ಹಣಕಾಸು ಖಾತೆ ಕೊಟ್ಟರೆ ಖಂಡಿತವಾಗಿಯೂ ಎಲ್ಲ ಇಲಾಖೆಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ ಆರಂಭಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುತ್ತೇನೆ ಎಂದರು.

ಇದನ್ನೂ ನೋಡಿ: ಒಳ ಮೀಸಲಾತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪತ್ರಿಕಾಗೋಷ್ಠಿ Janashakthi Media

Donate Janashakthi Media

Leave a Reply

Your email address will not be published. Required fields are marked *