ಶಿಮ್ಲಾ| ಮೇಘಸ್ಫೋಟದಿಂದ ಇಬ್ಬರು ಸಾವು, ಕೊಚ್ಚಿ ಹೋದ 20 ಜನರು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಜೂನ್‌ 25 ಬುಧವಾರದಂದು ಸಂಭವಿಸಿದ ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಮತ್ತು ಭಾರೀ ಮಳೆಯಾಗಿದ್ದೂ, ಇದರ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 20 ಜನರು ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ.

ಕಾಂಗ್ರಾ ಜಿಲ್ಲೆಯ ಮನುನಿ ಖಾದ್‌ನಿಂದ ಇಬ್ಬರ ಶವಗಳನ್ನು ಹೊರತೆಗೆಯಲಾಗಿದ್ದು, ಖಾನಿಯಾರ ಮನುನಿ ಖಾದ್‌ನಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾದ ನಂತರ ಇಂದಿರಾ ಪ್ರಿಯದರ್ಶಿನಿ ಜಲವಿದ್ಯುತ್ ಯೋಜನಾ ಸ್ಥಳದ ಬಳಿಯ ಕಾರ್ಮಿಕ ಕಾಲೋನಿಯಲ್ಲಿ ನೆಲೆಸಿದ್ದ ಸುಮಾರು 15-20 ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಶಿಮ್ಲಾ

ಮಳೆಯಿಂದಾಗಿ ಯೋಜನಾ ಕಾರ್ಯ ಸ್ಥಗಿತ

ಮಳೆಯಿಂದಾಗಿ ಯೋಜನಾ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಕಾರ್ಮಿಕರು ಸ್ಥಳದ ಸಮೀಪವಿರುವ ತಾತ್ಕಾಲಿಕ ಆಶ್ರಯಗಳಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಮನುನಿ ಖಾದ್ ಮತ್ತು ಹತ್ತಿರದ ಚರಂಡಿಗಳಿಂದ ಪ್ರವಾಹದ ನೀರು ಕಾರ್ಮಿಕ ಕಾಲೋನಿ ಕಡೆಗೆ ತಿರುಗಿ ಕಾರ್ಮಿಕರನ್ನು ಕೊಚ್ಚಿಕೊಂಡು ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಬಲವಂತದ ಭೂಸ್ವಾಧೀನ ವಿರೋಧೀ ಹೋರಾಟಗಾರರನ್ನು ಬಂಧಿಸಿದ ಪೋಲಿಸರ ದೌರ್ಜನ್ಯ ಕ್ಕೆ ಸಿ.ಪಿ.ಐ.(ಎಂ) ಖಂಡನೆ

ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ(SDRF), ಸ್ಥಳೀಯ ಆಡಳಿತ, ಗ್ರಾಮ ಪಂಚಾಯತ್ ಮತ್ತು ಕಂದಾಯ ಇಲಾಖೆಯ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಸ್ಥಳಕ್ಕೆ ತಲುಪಿವೆ.

ಆದಾಗ್ಯೂ, ಯೋಜನೆಯಲ್ಲಿ ತೊಡಗಿದ್ದ ಕೆಲವು ಸ್ಥಳೀಯ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಧರ್ಮಶಾಲಾದ ಬಿಜೆಪಿ ಶಾಸಕ ಸುಧೀರ್ ಶರ್ಮಾ, ಘಟನೆಯಲ್ಲಿ ಸುಮಾರು 20 ಕಾರ್ಮಿಕರು ಕೊಚ್ಚಿ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಕುಲ್ಲು ಜಿಲ್ಲೆಯ ಹಲವಾರು ಭಾಗಗಳಲ್ಲಿ ಮೇಘಸ್ಫೋಟದಿಂದಾಗಿ ದಿಢೀರ್ ಪ್ರವಾಹ ಉಂಟಾಗಿ, ಅನೇಕ ಮನೆಗಳು, ಶಾಲಾ ಕಟ್ಟಡ, ಅಂಗಡಿಗಳು, ಸಂಪರ್ಕ ರಸ್ತೆಗಳು ಮತ್ತು ಸಣ್ಣ ಸೇತುವೆಗಳು ಹಾನಿಗೊಳಗಾಗಿ, ಮೂವರು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ನೋಡಿ: ಕೌಶಲ್ಯದ ಹೆಸರಲ್ಲಿ ಕಾರ್ಮಿಕ ಮಂಡಳಿಯ ಹಣ ವ್ಯಯ – ಕಾರ್ಮಿಕ ಸಂಘಟನೆಗಳ ಆಕ್ಷೇಪ

Donate Janashakthi Media

Leave a Reply

Your email address will not be published. Required fields are marked *