ಕಲಬುರಗಿ: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಗಲ್ಲು ಖಾಯಂಗೊಳಿಸಿ ವಿಜಯಪುರ ಜಿಲ್ಲಾ ಕೋರ್ಟ್ ಆದೇಶವನ್ನು ಕಲಬುರಗಿ ಹೈಕೋರ್ಟ್ನ ದ್ವಿಸದಸ್ಯ ಪೀಠ ಎತ್ತಿಹಿಡಿದಿದ್ದೂ, ಅಕ್ಟೋಬರ್ 10ರಂದು ಇಬ್ರಾಹಿಂ ಸಾಬ್(31) ಮತ್ತು ಅಕ್ಬರ್(28)ಗೆ ಗಲ್ಲು ಶಿಕ್ಷೆ ಹಾಗೂ ಬಾನು ಬೇಗಂ ತಾಯಿ ಮತ್ತು ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
2017ರಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗುಂಡಕನಲ್ ಗ್ರಾಮದಲ್ಲಿ ದಲಿತ ಯುವಕ ಸಾಯಿಬಣ್ಣನನ್ನು ಪ್ರೀತಿಸಿ ಬಾನು ಬೇಗಂ ಮದುವೆಯಾಗಿದ್ದಳು. 9 ತಿಂಗಳ ಗರ್ಭಿಣಿ ಆಗಿದ್ದ ಬಾನು ಬೇಗಂ ಅನ್ನು ಸಹೋದರರು ಬೆಂಕಿ ಹಚ್ಚಿ ಕೊಂದಿದ್ದರು.
ಬಸವನಬಾಗೇವಾಡಿ ಪೊಲೀಸರು ತನಿಖೆ ನಡೆಸಿ ಚಾರ್ಜ್ಶಿಟ್ ಸಲ್ಲಿಸಿದರು. ವಿಚಾರಣೆ ನಡೆಸಿದ ವಿಜಯಪುರ ಜಿಲ್ಲಾ ಕೋರ್ಟ್ ಈ ಇಬ್ಬರು ಸಹೋದರರಿಗೆ ಮರಣದಂಡನ ಶಿಕ್ಷೆ ಹಾಗೂ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಬಳಿಕ ಕಲಬುರಗಿ ಹೈಕೋರ್ಟ್ ಪೀಠಕ್ಕೆ ಅಪರಾಧಿಗಳು ಮೇಲ್ಮನವಿ ಸಲ್ಲಿಸಿದ್ದರು.
ಇದನ್ನೂ ಓದಿ: ಒಂದು ದಿನದ ವೇತನ ಸಹಿತ ಮುಟ್ಟಿನ ರಜೆಯ ಘೋಷಣೆ: CITU ಸ್ವಾಗತ
ಇದೀಗ ಕಲಬುರಗಿ ಹೈಕೋರ್ಟ್ನ ದ್ವಿಸದಸ್ಯ ಪೀಠ ಈ ತೀರ್ಪುನ್ನು ಮಾನ್ಯ ಮಾಡಿದೆ. ಆ ಮೂಲಕ ಇಬ್ಬರು ಅಪರಾಧಿಗಳಿಗೆ ಗಲ್ಲು ಖಾಯಂಗೊಳಿಸಿ ಕೊಲೆಯಾದ ಬಾನು ಬೇಗಂನ ತಾಯಿ ಹಾಗೂ ಕುಟುಂಬದ ಐವರು ಸದಸ್ಯರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ಜಾತ್ರೆಗೆ ಕರೆದುಕೊಂಡು ಹೋಗಿ ಅಂಗನವಾಡಿ ಶಿಕ್ಷಕಿಯ ಕೊಲೆ: ಕಿರಾತಕ ಅಂದರ್
ಜಾತ್ರೆಗೆಂದು ಕರೆದುಕೊಂಡು ಹೋಗಿ ಅಂಗನವಾಡಿ ಶಿಕ್ಷಕಿಯನ್ನು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಮೂಲದ ಅಶ್ವಿನಿ ಪಾಟೀಲ್(50) ಹತ್ಯೆಯಾದ ಅಂಗನವಾಡಿ ಶಿಕ್ಷಕಿ. ಅಕ್ಟೋಬರ್ 2ರಂದು ಕಕ್ಕೇರಿ ಬಿಷ್ಟಾದೇವಿ ಜಾತ್ರೆಗೆಂದು ಅಶ್ವಿನಿ ಹೋಗಿದ್ದರು. ವಾಪಸ್ ಮನೆಗೆ ಬಂದಿರಲಿಲ್ಲ. ನಂದಗಡ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು.
ಕೇಸ್ ದಾಖಲಾದ ನಾಲ್ಕು ದಿನದಲ್ಲಿ ಅರಣ್ಯ ಪ್ರದೇಶದಲ್ಲಿ ಅಶ್ವಿನಿ ಶವವಾಗಿ ಪತ್ತೆ ಆಗಿದ್ದರು. ಅಂದು ಜಾತ್ರೆಗೆ ಕರೆದುಕೊಂಡು ಹೋಗಿದ್ದ ಶಂಕರ್ ಪಾಟೀಲ್ ಪೊಲೀಸರು ವಿಚಾರಣೆ ಮಾಡಿದ್ದು, ತಾನೂ ಜಾತ್ರೆಗೆ ಕರೆದುಕೊಂಡು ಹೋಗಿದ್ದಾಗಿ ಒಪ್ಪಿಕೊಂಡಿದ್ದ. ಆದರೆ ಕೊಲೆ ಮಾಡಿಲ್ಲ ಎಂದು ಡ್ರಾಮಾ ಮಾಡುತ್ತಿದ್ದವನಿಗೆ ಪೊಲೀಸ್ ಭಾಷೆಯಲ್ಲಿ ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದ. ಅಶ್ವಿನಿ ಪಾಟೀಲ್ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಶಂಕರ್, ಅವರಿಂದ ಐದು ಲಕ್ಷ ರೂ ಸಾಲ ಪಡೆದಿದ್ದ, ವಾಪಾಸ್ ಕೇಳಿದ್ದಕ್ಕೆ ಹತ್ಯೆ ಮಾಡಿದ್ದಾನೆ ಎನ್ನಲಾಗುತ್ತಿದೆ.
ಇದನ್ನೂ ನೋಡಿ: ನಮಗೆ 10 ಸಾವಿರ ಪಿಂಚಣಿ ನೀಡಿ – ವಿಕಲಚೇತನರ ಆಗ್ರಹ Janashakthi Media
