ಚಳ್ಳಕೆರೆ: ಪತ್ನಿಯ ಸೀಮಂತ ಕಾರ್ಯ ಮುಗಿಸಿಕೊಂಡು ಬಂದ ಬೆಸ್ಕಾಂ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬೆಸ್ಕಾಂ ಹಿಂಭಾಗದ ನೌಕರರ ವಸತಿ ಗೃಹದಲ್ಲಿ ನಡೆದಿದೆ. ಹೊಟ್ಟೆ ನೋವು ತಾಳಲಾರದೆ ಬೆಸ್ಕಾಂ ನೌಕರ ರಘುನಾಥ್ ( 29) ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.
ಸಾಣೀಕೆರೆ ಗ್ರಾಮದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವನು ಸುಮಾರು ಐದು ವರ್ಷಗಳ ಹಿಂದೆ ವಿವಾಹವಾಗಿದ್ದ. ಪತ್ನಿ ಗರ್ಭಿಣಿಯಾಗಿದ್ದು, ಜೂನ್ 15 ಭಾನುವಾರವಷ್ಟೇ ಮೊದಲ ಮಗುವಿನ ಗರ್ಭಿಣಿ ಸೀಮಂತ ಕಾರ್ಯ ಮಾಡಲಾಗಿತ್ತು. ಜೂನ್ 16 ಸೋಮವಾರ ನಗರದ ವಸತಿ ಗೃಹದಲ್ಲಿ ನೇಣಿಗೆ ಶರಣಾಗಿದ್ದಾನೆ.
ಇದನ್ನ ಓದಿ: ಜವಾಹರ ನವೋದಯ ವಿದ್ಯಾಲಯ: 2026-27ನೇ ಸಾಲಿನ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದು. ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ನೋಡಿ: ಬಾನು ಮುಷ್ತಾಕ್ಗೆ ಬೂಕರ್ ಪ್ರಶಸ್ತಿ | ಅಕ್ಷರಕ್ಕಾಗಿ ಸಂಭ್ರಮಿಸುವ ವಾತಾವರಣ: ಅನುಪಮಾJanashakthi Media