ಕಾನೂನು ಧಿಕ್ಕರಿಸಿದ ಸ್ಕೂಲ್ ವಿರುದ್ಧ ಕ್ರಮಕ್ಕೆ “ಲಂಚ ಬೇಕೆ ಲಂಚ?” ಎಂಬ ವಿನೂತನ ಪ್ರತಿಭಟನೆ

ಬೆಂಗಳೂರು: ಕನ್ನಡಪರ ಸಂಘಟನೆಗಳು, ನೆಲದ ಕಾನೂನು ಧಿಕ್ಕರಿಸುತ್ತಿರುವ ಸಾಮರ್ ಇಂಟರ್ ನ್ಯಾಷನಲ್ ಸ್ಕೂಲ್ ವಿರುದ್ಧ ಕ್ರಮ ಕೈಗೊಳ್ಳದ ಅಲ್ಪಸಂಖ್ಯಾತ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆಗಳ ಆಯುಕ್ತರ ಕಛೇರಿಗಳ ಮುಂಭಾಗ ನ್ಯಾಯಾಲಯದ ಆದೇಶ ಪಾಲಿಸಲು ನಿಮಗೆ “ಲಂಚ ಬೇಕೆ ಲಂಚ?” ಎಂಬ ವಿನೂತನ ಪ್ರತಿಭಟನೆ ನಡೆಸಲು ಮುಂದಾಗಿವೆ. ಕಾನೂನು

ಅಲ್ಲದೇ ಶಾಲಾ ಆಡಳಿತ ಮಂಡಳಿಯನ್ನು ರಕ್ಷಿಸುತ್ತಿರುವ ಅಧಿಕಾರಿಗಳನ್ನು ಸನ್ಮಾನಿಸುವ ಚಳವಳಿಯನ್ನು ಸಹ ಹಮ್ಮಿಕೊಳ್ಳಲು ತೀರ್ಮಾನಿಸಿವೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡ ಸೂರ್ಯ ಅಡಿಗ ಶ್ರೀನಿವಾಸ್, “ಹೈಕೋರ್ಟ್ ತೀರ್ಪನ್ನು ಜಾರಿಗೊಳಿಸಲು ನಿಮಗೆ ಲಂಚ ಬೇಕೆ ಲಂಚ ಎಂದು ಪ್ರಶ್ನಿಸುವ ಹಾಗೂ ಅನಧಿಕೃತ ಶಾಲೆಯ ಬೆನ್ನೆಲುಬಾಗಿರುವ ಆಧಿಕಾರಿಗಳನ್ನು ಸನ್ಮಾನಿ ಸುವ ಹೋರಾಟಗಳನ್ನು ನ್ಯಾಯಾಲಯದ ಆದೇಶ ಪಾಲನೆಯಾಗುವ ತನಕ ಹಮ್ಮಿಕೊಳ್ಳುತ್ತೇವೆ” ಎಂದರು. ಕಾನೂನು

ಇದನ್ನೂ ಓದಿ: ಬೆಂಗಳೂರು | ಗೂಗಲ್‌’ ಗೆ 27 ವರ್ಷದ ಸಂಭರ್ಮ ಲೋಗೊ ಬಿಡುಗಡೆ

ಈ ಆಡಳಿತ ಮಂಡಳಿಯ ವಸತಿ ಶಾಲೆಗೆ ಸರ್ಕಾರದ ಅನುಮತಿಯಿಲ್ಲ. ನಕಲಿ ದಾಖಲೆ ಸೃಷ್ಟಿಸಿ 5 ಲಕ್ಷ ರೂಪಾಯಿ ಪಡೆದಿರುವ ಶಾಲಾ ಮುಖ್ಯಸ್ಥ ಅರ್ಷದ್ ಮುಖ್ತಾರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಅಲ್ಪಸಂಖ್ಯಾತ ಇಲಾಖೆಯಿಂದ ಮದರಸ ನಡೆಸಲು ಹಣ ಪಡೆದಿರುವ ಜಾಮಿಯ ಮೊಹಮ್ಮದಿಯ ಮನ್ಸೂರ, ಜಾಮಿಯ ಮೊಹಮ್ಮದಿಯ ಸೋಸೈಟಿ, ಆಲ್ ಜಾಮಿಯ ಮೊಹಮ್ಮದಿಯ ಎಜುಕೇಷನ್ ಸೊಸೈಟಿ ಸಂಸ್ಥೆಗಳು ದೇಶದ ಯಾವುದೇ ರಾಜ್ಯದಲ್ಲಿ ನೊಂದಣಿಯಾಗಿಲ್ಲ.

ಹೀಗಿದ್ದರೂ 2017 ರಲ್ಲಿ ಅಲ್ಪಸಂಖ್ಯಾತ ಇಲಾಖೆ 10 ಲಕ್ಷ ಮಂಜೂರು ಮಾಡಿ, 5 ಲಕ್ಷ ರೂ ಬಿಡುಗಡೆ ಮಾಡಿತ್ತು. ಇದನ್ನು ಪ್ರಶ್ನಿಸಿದಾಗ ಹೈಕೋರ್ಟ್ ಸೆಪ್ಟೆಂಬರ್ 24 ರಂದು ಕ್ರಮ ತೆಗೆದು ಕೊಳ್ಳುವಂತೆ ನೀಡಿದ ಆದೇಶ ಪಾಲನೆಯಾಗುತ್ತಿಲ್ಲ. ಇದೇ ಮೇ 30 ರಂದು ಈ ಶಾಲೆಯ 1 ರಿಂದ 10 ನೇ ತರಗತಿ ವರೆಗಿನ ಮಾನ್ಯತೆಯನ್ನು ರದ್ದು ಮಾಡಲಾಗಿದೆ.

ಇದನ್ನು ಆಡಳಿತ ಮಂಡಳಿ ಪ್ರಶ್ನಿಸಿ ಒಂದು ತಿಂಗಳುಗಳ ಕಾಲ ತಡೆಯಾಜ್ಞೆ ತಂದಿತ್ತು. ಜುಲೈ 29 ರಂದು ನಾಲ್ಕು ತಿಂಗಳುಗಳ ಒಳಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ನೀಡಿದ ಆದೇಶಕ್ಕೂ ಕಿಮ್ಮತ್ತು ನೀಡುತ್ತಿಲ್ಲ. ಆಡಳಿತ ವ್ಯವಸ್ಥೆಯ ದಿವ್ಯ ನಿರ್ಲಕ್ಷ್ಯ ಹಾಗೂ ಅನಧಿಕೃತ ಸಂಸ್ಥೆಗಳ ಪರವಾಗಿನ ಒಲವನ್ನು ಇದು ಎತ್ತಿ ತೋರಿಸುತ್ತಿದೆ ಎಂದರು.

ಇದನ್ನೂ ನೋಡಿ: ಧರ್ಮಸ್ಥಳದ ನಿಗೂಢಗಳು | ಕ್ಲೈಮ್ಯಾಕ್ಸ್‌ನತ್ತ SIT ತನಿಖೆ ; ಫಲಿತಾಂಶಕ್ಕಾಗಿ ಕಾಯೋಣ Janashakthi Media

Donate Janashakthi Media

Leave a Reply

Your email address will not be published. Required fields are marked *