ಉಪ ಸಭಾಪತಿ ಧರ್ಮೇಗೌಡ ಆತ್ಮಹತ್ಯೆ

ಕಡೂರು : ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗುಣಸಾಗರ ಮಂಗೇನಹಳ್ಳಿ ಬಳಿ ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೇವೇಗೌಡರ ಕುಟುಂಬಕ್ಕೆ ಆಪ್ತರಾಗಿದ್ದ ಧರ್ಮೇಗೌಡ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ. ಹೆಚ್.ಡಿ. ಕುಮಾರಸ್ವಾಮಿ ಆಪ್ತರಾಗಿದ್ದ ಧರ್ಮೇಗೌಡರು ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಗನ್ ಮ್ಯಾನ್ ಮತ್ತು ಎಸ್ಕಾರ್ಟ್ ಸಿಬ್ಬಂದಿಯನ್ನು ಮನೆಗೆ ಕಳುಹಿಸಿ ಒಬ್ಬರೇ ಕಾರ್ ನಲ್ಲಿ ತೆರಳಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ದೊರೆತಿದೆ.

ರಾತ್ರಿ 10 ಗಂಟೆಯಾದರೂ ಅವರು ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಲಾಗಿದ್ದು, 11:30 ರ ವೇಳೆಗೆ ಗುಣಸಾಗರ ಸಮೀಪ ಅವರ ಮೃತದೇಹ ಪತ್ತೆಯಾಗಿದೆ. ಘಟನಾಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೆಡಿಎಸ್ ಪಕ್ಷದಿಂದ ಕಡೂರು ಕ್ಷೇತ್ರದ ಶಾಸಕರಾಗಿ ಕಾರ್ಯನಿರ್ವಹಿಸಿದ್ದ ಧರ್ಮೇಗೌಡರವರು, ವಿಧಾನ ಪರಿಷತ್ ಸದಸ್ಯರಾಗಿ ಉಪಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರ ಸಹೋದರ ಭೋಜೇಗೌಡ ಕೂಡ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಧರ್ಮೇಗೌಡರವರ ಈ ನಿರ್ಧಾರದಿಂದ ದಿಗ್ಬ್ರಮೆಯಾಗಿದೆ ಹಾಗೂ ಅವರಿಗೆ ಸಂತಾಪ ಸೂಚಿಸುವುದಾಗಿ ಮಾಜಿ ಪ್ರಧಾನಿ ದೇವೆಗೌಡ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *