ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನಕ್ಕೆ ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ

ಬೆಂಗಳೂರು:- ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ 26 ರಂದು, ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ರಾಜ್ಯದಲ್ಲಿರುವ ವಿಕಲಚೇತನ ಮತ್ತು ಹಿರಿಯ ನಾಗರಿಕರ ಮತದಾರರಿಗೆ ಯಾವುದೇ ಅಡೆತಡೆ ಇಲ್ಲದೆ ಮತಗಟ್ಟೆಗಳಿಗೆ ಬಂದು ಸುಗಮವಾಗಿ ಮತದಾನ ಮಾಡಲು ಅಗತ್ಯವಿರುವ ವಿವಿಧ ಸೇವೆ ಹಾಗೂ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.

ರಾಂಪ್ (ಇಳಿಜಾರು) ರೈಲಿಂಗ್, ಗಾಲಿ ಕುರ್ಚಿಗಳು, ಅಂಧ ಮತದಾರರಿಗೆ ಅಗತ್ಯವಿರುವಂತೆ ಮತಯಂತ್ರದಲ್ಲಿ ಬೈಲ್ ಲಿಪಿ ಸಂಖ್ಯೆಗಳು, ಬೈಲ್ ಲಿಪಿಯ ಡಮ್ಮಿ ಮತಪತ್ರ, ಬೂತಕನ್ನಡಿ, ಶ್ರವಣದೋಷವುಳ್ಳ ಮತದಾರರಿಗೆ ಅಗತ್ಯವಿರುವಂತ ಸಂಜ್ಞಾ ಭಾಷಾ ತಜ್ಞರ ನೆರವು, ಸೂಚನಾ ಫಲಕಗಳು, ಶೌಚಾಲಯದ ವ್ಯವಸ್ಥೆ, ಮತದಾನ ಮಾಡಲು ಪ್ರತ್ಯೇಕ ಸರಥಿ ಸಾಲು, ಕುಡಿಯುವ ನೀರಿನ ವ್ಯವಸ್ಥೆ, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಮತ್ತು ಆರೋಗ್ಯ ಸಹಾಯಕರ ನೆರವು, ಅಗತ್ಯವಿರುವ ವಿಕಲಚೇತನರು ಮತ್ತು ಹಿರಿಯ ನಾಗರಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಹಾಗೂ ತರಬೇತಿ ಪಡೆದ ಸ್ವಯಂ ಸೇವಕರ ಸೇರಿದಂತೆ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ದ್ವೇಷ ಭಾಷಣ : ಕ್ರಮಕ್ಕೆ ಜನವಾದಿ ಮಹಿಳಾ ಸಂಘಟನೆ ಆಗ್ರಹ

ಎಲ್ಲಾ ವಿಕಲಚೇತನರು ಮತ್ತು ಹಿರಿಯ ನಾಗರಿಕರು ಮತಗಟ್ಟೆಗಳಿಗೆ ಬಂದು ಮತದಾನ ಮಾಡಿ ತಮ್ಮ ಹಕ್ಕನ್ನು ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದೆ.

ಇದನ್ನೂ ನೋಡಿ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ : ಜಿದ್ದಾ ಜಿದ್ದಿಕಣ, ಕ್ಷೀಣಗೊಂಡ ಜೆಡಿಎಸ್‌ ಪ್ರಾಬಲ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *