ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಸಂಬಂಧ, 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ಜನವರಿ 27ರಂದು ವಜಾಗೊಳಸಿದೆ.
ಸುಪ್ರೀಂ ಕೋರ್ಟ್ಗೇ ಅರ್ಜಿ ಸಲ್ಲಿಸುವುದು ಸೂಕ್ತವೆಂದು ಹೇಳಿ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ.
ಇದನ್ನೂ ಓದಿ: ರ್ಯಾಲಿ ನಿಷೇಧ ಮೀರಿ ಹೆದ್ದಾರಿಗಿಳಿದ 50 ಸಾವಿರ ಜನ; ಚುನಾವಣಾ ಆಯೋಗ–ಆರ್ಎಸ್ಎಸ್, ಟಿಎಂಸಿ ವಿರುದ್ಧ ಸಿಪಿಐ(ಎಂ) ವಾಗ್ದಾಳಿ
ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದ 15ನೇ ಆರೋಪಿಯಾಗಿದ್ದು, ಈ ಪ್ರಕರಣ ಸಂಬಂಧ ವಿನಯ್ ಕುಲಕರ್ಣಿಗೆ 2021ರಲ್ಲೇ ಕೋರ್ಟ್ನಿಂದ ಜಾಮೀನು ಸಿಕ್ಕಿತ್ತು. ಆದ್ರೆ, ಇತ್ತೀಚೆಗೆ ಸಾಕ್ಷಗಳಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ವಿನಯ್ ಕುಲಕರ್ಣಿ ಉಲ್ಲಂಘಿಸಿದ್ದು, ಜಾಮೀನು ರದ್ದುಪಡಿಸುವಂತೆ ಸಿಬಿಐ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಬಳಿಕ ಸುಪ್ರೀಂಕೋರ್ಟ್ ಸಿಬಿಐನ ಸಾಕ್ಷಿಗಳನ್ನ ಪರಿಶೀಲಿಸಿ ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ ಹೋಗಬೇಕಾಯ್ತು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿದ್ದಾರೆ. ಇದೀಗ ಹೈಕೋರ್ಟ್ ಹೇಳಿದಂತೆ ವಿನಯ್ ಕುಲಕರ್ಣಿ ಜಾಮೀನುಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ನೋಡಿ: ಕೋಗಿಲು ಗಣರಾಜ್ಯೋತ್ಸವ | ” ನಾವು ದುಡಿಯಲು ಬಂದವರು, ಯಾರ ಆಸ್ತಿಯನ್ನು ಕಸಿಯಲು ಬಂದವರಲ್ಲ” Janashakthi Media
