ವಿವಾಹ ಸಂಬಂಧಿ ಮತಾಂತರ ನಿಷೇಧ ಕಾನೂನು ಜಾರಿ; ಸಚಿವ ಸಿಟಿ ರವಿ

ಉತ್ತರ ಪ್ರದೇಶ, ಹರ್ಯಾಣ ರಾಜ್ಯಗಳ ಮಾದರಿಯಲ್ಲಿ ಕಾನೂನು

 

ಬೆಂಗಳೂರು:  ಅಂತರ್​ ಧರ್ಮಿಯ ಮದುವೆಗಾಗಿ ಬಲವಂತವಾಗಿ ಮತಾಂತರ ನಡೆಸಿದರೆ ಅವರನ್ನು ‘ರಾಮ ನಾಮ ಸತ್ಯ ಪ್ರಯಾಣ’ಕ್ಕೆ ಕಳುಹಿಸಿಕೊಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಿಂಗ್​ ಕಳೆದ ಎರಡು ದಿನಗಳ ಹಿಂದೆ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯದಲ್ಲಿ ಕೂಡ ಬಲವಂತ ಮತಾಂತರ ನಡೆಸುವವರಿಗೆ ಶಿಕ್ಷೆ ವಿಧಿಸುವ ಕಾನೂನು ತರುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಎಚ್ಚರಿಕೆ ನೀಡಿದ್ದಾರೆ.

 

ಈ ಕುರಿತು ಟ್ವೀಟ್​ ಮಾಡಿರುವ ಅವರು, ಮದುವೆಗಾಗಿ ಬಲವಂತವಾಗಿ ಮತಾಂತರವಾಗುವುದನ್ನು ತಡೆಯುವ ಉದ್ದೇಶದಿಂದ ರಾಜ್ಯದಲ್ಲಿ ಧಾರ್ಮಿಕ ಮತಾಂತರ ನಿಷೇಧಿಸುವ ಕಾನೂನನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ. ಅಲಹಾಬಾದ್​ ನ್ಯಾಯಾಲಯದ ತೀರ್ಪು ಉಲ್ಲೇಖಿಸಿ, ಟ್ವೀಟ್​ ಮಾಡಿರುವ ಅವರು, ಮಹಿಳೆಯರ ಘನತೆಗೆ ಕುಂದು ಉಂಟಾಗುವ ಕಾರ್ಯ ನಡೆಸಿದರೆ ಸುಮ್ಮನಿರುವುದಿಲ್ಲ ಎಂದು ಇದೇ ವೇಳೆ ಎಚ್ಚರಿಸಿದ್ದಾರೆ.

ಅಲಹಾಬಾದ್​ ಹೈ ಕೋರ್ಟ್​​ ಆದೇಶದಂತೆ ಮದುವೆಗಾಗಿ ಮಹಿಳೆಯರನ್ನು ಬಲವಂತದ ಮತಾಂತರಗೊಳಿಸುವುದನ್ನು ನಿಷೇಧಿಸಲು ಕಾನೂನನ್ನು ಜಾರಿಗೆ ತರಲಾಗುವುದು. ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಮರೆಮಾಚಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಯಾವುದೇ ಮತಾಂತರದ ಕೃತ್ಯದಲ್ಲಿ ಭಾಗಿಯಾದವರು ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: ಕೇವಲ ವಿವಾಹಕ್ಕಾಗಿ ಮತಾಂತರವಾದರೆ ಅದು ಮಾನ್ಯವಲ್ಲ: ಅಲಹಾಬಾದ್ ಹೈಕೋರ್ಟ್

ಮದುವೆ ಕಾರಣದಿಂದಾಗಿ ಧರ್ಮ ಬಯಾಯಿಸಿಕೊಳ್ಳುವುದು ಮಾನ್ಯವಲ್ಲ ಎಂದು ಅಲಹಾಬಾದ್​ ಕೋರ್ಟ್​ ತಿಳಿಸಿದೆ. ನವ ದಂಪತಿಗಳ ಪ್ರಕರಣವೊಂದರಲ್ಲಿ ಈ ಹೇಳಿಕೆ ನೀಡಿದ್ದು, ಅವರ ಅರ್ಜಿ ವಜಾಗೊಳಿಸಲಾಗಿದೆ. ಅಂತರ್​ ಧರ್ಮಿಯ ಮದುವೆಯಿಂದ ತೊಡಗು ಉಂಟಾಗಬಹುದು ಎಂದು ಪೊಲೀಸರಿಗೆ ನಿರ್ದೇಶಿಸಲು ಯುವತಿಯ ತಂದೆ ನ್ಯಾಯಾಲಯ ಮೊರೆ ಹೋಗಿದ್ದರು.

ಇದನ್ನೂ ಓದಿ: ಲವ್​ ಜಿಹಾದ್ ​ನಡೆಸಿದರೆ ರಾಮ್​ನಾಮ್​ ಸತ್ಯ ಮಾರ್ಗ; ಸಿಎಂ ಯೋಗಿ ಆದಿತ್ಯನಾಥ್​

ಬಲಪಂಥೀಯ ಗುಂಪುಗಳ ಪ್ರಕಾರ ‘ಲವ್​ ಜಿಹಾದ್’​ ಎಂಬುದು ಪಿತೂರಿಯಾಗಿದೆ. ಮುಸ್ಲಿಂ ಸಮುದಾಯಕ್ಕೆ ಮಹಿಳೆಯರನ್ನು ಮತಾಂತರಗೊಳಿಸುವ ಉದ್ದೇಶದಿಂದ ತಮ್ಮ ನಿಜ ವ್ಯಕ್ತಿತ್ವ ಮರೆಮಾಚಿ ಅವರನ್ನು ಕೆಲವು ಯುವಕರು ಮದುವೆಯಾಗುತ್ತಾರೆ ಎನ್ನಲಾಗಿದೆ.

Donate Janashakthi Media

Leave a Reply

Your email address will not be published. Required fields are marked *