ಕೊಪ್ಪಳದಲ್ಲಿ ಮತ್ತೆ ಕುಣಿಯಲಿದೆಯೇ ಕರಡಿ ಅಥವಾ ಮತದಾರರ ಮಣೆ ಹೊಸ ಮುಖಕ್ಕೋ?

ಕೊಪ್ಪಳ: ದಕ್ಷಿಣ ಭಾರತದ ಕುಂಭ ಮೇಳ ಎಂದೇ  ಪ್ರಸಿದ್ದವಾಗಿರುವ ಕೊಪ್ಪಳ ನಗರದ ಗವಿಸಿದ್ದೇಶ್ವರ ಜಾತ್ರೆಯು ಪ್ರಸಿದ್ದವಾದಂತೆ ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣೆ ಜಾತ್ರೆಯೂ ಪ್ರಸಿದ್ದೆ ಪಡೆದಿದೆ ಎಂದರೆ ತಪ್ಪಾಗಲಾರದು.

ಕಳೆದ ಹಲವು ಲೋಕಸಭಾ  ಚುನಾವಣೆಗಳಿಂದ ಕ್ಷೇತ್ರದ ಇಲ್ಲಿ ಕರಡಿ ಕುಣಿದು ಕಮಲ ಅರಳುತ್ತಾ ಬಂದಿತ್ತು.  ಈ ಬಾರಿ ಕರಡಿಗೆ ಟಿಕೆಟ್ ಇಲ್ಲದೇ ಮತದಾರ ಮನಸ್ಸು ಬದಲಿಸಿ ಎಂದು ವೈದ್ಯರನ್ನು ಬಿಜೆಪಿ ಚುನಾವಣಾ ಅಖಾಡಕ್ಕೆ ಇಳಿಸಿದೆ. ಕ್ಷೇತ್ರದಲ್ಲೀಗ ಕುಟುಂಬ ರಾಜಕಾರಣ ವರ್ಸಸ್‌ ಹೊಸ ಮುಖದ ಸಮರ ಏರ್ಪಟ್ಟಿದೆ.

ಕೊಪ್ಪಳ ಲೋಕಸಭೆ ಕ್ಷೇತ್ರದ ಚುನಾವಣೆ ಈ ಬಾರಿ ಹೊಸ ಇತಿಹಾಸಕ್ಕೆ ಸಾಕ್ಷಿಯಾಗುತ್ತಿದೆ. ಕಾಂಗ್ರೆಸ್‌ನಿಂದ ರಾಜಶೇಖರ ಹಿಟ್ನಾಳ್‌, ಬಿಜೆಪಿಯಿಂದ ಹೊಸಮುಖ ಡಾ| ಬಸವರಾಜ ಕ್ಯಾವಟರ್‌ ನಡುವೆ ಕಾದಾಟ ನಡೆದಿದೆ. ಕಮಲಕ್ಕೆದಳ ಹಾಗೂ ರೆಡ್ಡಿ ಶಕ್ತಿ ದೊರೆತರೆ, ಕಾಂಗ್ರೆಸ್‌ಗೆ ಆರು ಶಾಸಕರ ಬಲದ ಜತೆಗೆ ಬಿಜೆಪಿ ಸಂಸದರಾಗಿದ್ದ ಸಂಗಣ್ಣ ಕರಡಿ ಸೇರ್ಪಡೆಯಿಂದ ಹೆಚ್ಚಿನ ಬಲ ಬಂದಿದೆ.ಕಾಂಗ್ರೆಸ್‌ನಿಂದ ರಾಜಶೇಖರ ಹಿಟ್ನಾಳ್‌, ಬಿಜೆಪಿಯಿಂದ ಹೊಸಮುಖ ಡಾ| ಬಸವರಾಜ ಕ್ಯಾವಟರ್‌ ನಡುವೆ ಕಾದಾಟ ನಡೆದಿದೆ. ಕಮಲಕ್ಕೆ ದಳ ಹಾಗೂ ರೆಡ್ಡಿ ಶಕ್ತಿ ದೊರೆತರೆ, ಕಾಂಗ್ರೆಸ್‌ಗೆ ಆರು ಶಾಸಕರ ಬಲದ ಜತೆಗೆ ಬಿಜೆಪಿ ಸಂಸದರಾಗಿದ್ದ ಸಂಗಣ್ಣ ಕರಡಿ ಸೇರ್ಪಡೆಯಿಂದ ಹೆಚ್ಚಿನ ಬಲ ಬಂದಿದೆ.

ಇದನ್ನೂ ಓದಿ: ರೇವಣ್ಣ ದಂಪತಿ ಪ್ರಜ್ವಲ್ಗೆ ಬುದ್ಧಿ ಹೇಳುವ ಬದಲು ಕತ್ತೆ ಕಾಯುತ್ತಿದ್ದರೇ? ಶಿವರಾಮೇಗೌಡ

ಒಟ್ಟು 17 ಚುನಾವಣೆಗಳು ನಡೆದಿದ್ದು ಕಾಂಗ್ರೆಸ್‌ 9, ಜೆಡಿಎಸ್‌ 2, ಬಿಜೆಪಿ 3, ನಾಲ್ಕು ಬಾರಿ ಪಕ್ಷೇತರರು ಗೆದ್ದಿದ್ದಾರೆ. 2009ರಿಂದ ಕ್ಷೇತ್ರ ಕಮಲದ ಹಿಡಿತದಲ್ಲಿದೆ. ಅದರ ಮರು ವಶಕ್ಕೆ ಕಾಂಗ್ರೆಸ್‌ ಹಠಕ್ಕೆ ಬಿದ್ದಿದೆ. ಎಂಟು ವಿಧಾನಸಭೆ ಕ್ಷೇತ್ರಗಳ ಪೈಕಿ 2018ರಲ್ಲಿ 5 ಬಿಜೆಪಿ, 2 ಕಾಂಗ್ರೆಸ್‌, 1 ಜೆಡಿಎಸ್‌ ಗೆದ್ದಿದ್ದರೆ, 2023ರಲ್ಲಿ 6 ಕಾಂಗ್ರೆಸ್‌, 1 ಬಿಜೆಪಿ, ಜನಾರ್ದನ ರೆಡ್ಡಿ ನೇತೃತ್ವದ ಕೆಆರ್‌ಪಿಪಿ 1 ಸ್ಥಾನದಲ್ಲಿ ಗೆದ್ದಿತ್ತು. ರೆಡ್ಡಿ ಈಗ ಬಿಜೆಪಿ ಸೇರಿದ್ದಾರೆ. 2014 ಹಾಗೂ 2019ರಲ್ಲಿ ಸಂಗಣ್ಣ ಕರಡಿ ಬಿಜೆಪಿ ಸಂಸದರಾಗಿದ್ದರು. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ತಪ್ಪಿದ್ದರಿಂದ ಕಾಂಗ್ರೆಸ್‌ ಸೇರಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ರಾಜಶೇಖರ ಹಿಟ್ನಾಳ್‌ ಗ್ಯಾರಂಟಿ ಯೋಜನೆ ಜತೆಗೆ ಮೋದಿ ಆಡಳಿತ ವೈಫಲ್ಯಗಳನ್ನು ಪಟ್ಟಿ ಮಾಡಿ ಜನರ ಮುಂದಿಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಡಾ| ಬಸವರಾಜ ಅವರು ಪ್ರಧಾನಿ ಮೋದಿ ನಾಮ ಬಲದ ಜತೆ ಕೇಂದ್ರ ಸರಕಾರದ ಅಭಿವೃದ್ಧಿ ಕೆಲಸ, ದೇಶದ ಭದ್ರತೆ, ವಿಕಸಿತ ಭಾರತದ ಕನಸು, ಅಂಜನಾದ್ರಿ ಅಭಿವೃದ್ಧಿ, ಹಿಂದೆ ಕ್ಷೇತ್ರದಲ್ಲಿ ಸಂಗಣ್ಣ ಕರಡಿ ಮಾಡಿದ ಅಭಿವೃದ್ಧಿ ಕಾರ್ಯ ಮುಂದಿಟ್ಟು ಮತ ಯಾಚಿಸುತ್ತಿದ್ದಾರೆ.

ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿದ್ದರೆ ಅನಂತರದಲ್ಲಿ ಕುರುಬ, ಎಸ್‌ಸಿ-ಎಸ್‌ಟಿ, ಮುಸ್ಲಿಮರು ಗಣನೀಯ ಸಂಖ್ಯೆಯಲ್ಲಿದ್ದಾರೆ. ರಾಜಶೇಖರ ಹಿಟ್ನಾಳ್‌ ಕುರುಬ ಸಮುದಾಯಕ್ಕೆ ಸೇರಿದ್ದು ಜಾತಿ ಬಲ, ಅಲ್ಪಸಂಖ್ಯಾಕ, ಅಹಿಂದ

ಮತಗಳು ಆಸರೆಯಾಗಲಿವೆ ಎನ್ನುವ ನಿರೀಕ್ಷೆಯಲ್ಲಿದ್ದಾರೆ. ಡಾ| ಬಸವರಾಜ ಪ್ರಬಲ ಪಂಚಮಸಾಲಿ ಸಮುದಾಯಕ್ಕೆ ಸೇರಿದ್ದು, ಲಿಂಗಾಯತ, ಹಿಂದುತ್ವ, ಎಸ್‌ಸಿ-ಎಸ್‌ಟಿ ಮತಗಳ ಮೇಲೆ ಕಣ್ಣಿಟ್ಟಿದ್ದಾರೆ. ಕಳೆದ ಮೂರು ಚುನಾವಣೆಗಳಲ್ಲಿ ಲಿಂಗಾಯತ ನಾಯಕರೇ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. ಅದೇ ಲೆಕ್ಕಾಚಾರವನ್ನು ಹಾಕಿ ಬಿಜೆಪಿ ಡಾಕ್ಟರ್‌ಗೆ ಟಿಕೆಟ್‌ ನೀಡಿದೆ.

ಜೂನ್ 4 ರಂದು ಈ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಕಿಂಗ್ ಎಂದು ತಿಳಿಯಲಿದೆ.

ಕೊಪ್ಪಳ ಲೋಕ ಸಭಾ ಕ್ಷೇತ್ರ ಒಂದು ರೀತಿ ಬಿಜೆಪಿ ಭ್ರದಕೋಟೆ. ಕಳೆದ ಮೂರು ಅವಧಿಯಲ್ಲಿ ಈ ಲೋಕಸಭಾ ಕ್ಷೇತ್ರದಲ್ಲಿ ಬಿಜಿಪಿಯಿಂದಲೇ ಅಭ್ಯರ್ಥಿಗಳು  ಆಯ್ಕೆಯಾಗಿದ್ದಾರೆ. ಬಿಜೆಪಿ ಭದ್ರ ಕೋಟೆಯನ್ನು ಚಿದ್ರಮಾಡಲು ಕಾಂಗ್ರೆಸ್ ಪಕ್ಷ ಎಲ್ಲಾ ರೀತಿಯ ಪ್ರಯೋಗ ಮಾಡಿ ಚುನಾವಣೆಯಲ್ಲಿ ಗೆಲ್ಲಲು ಸನ್ನದ್ದವಾಗಿದೆ. ಕ್ಷೇತ್ರದ ಕಣದಲ್ಲಿ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿ ಇದ್ದರೂ,  ಕಾಂಗ್ರೆಸ್ ಬಿಜೆಪಿ ಅಭ್ಯರ್ಥಿ ಗಳಿಗೆ ನೇರಹಣಾ ಹಣಿ ಇದೆ.

ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಕಳೆದ ಲೋಕಸಭಾ ಕ್ಷೇತ್ರದ ಚುನಾಬಣೆಯಲ್ಲಿ ಕೇವಲ 20 ಸಾವಿರ ಮತಗಳ ಅಂತರ ದಿಂದ ಸೋತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೆ ಸೋತಿರುವ ಸಿಂಪತಿ. ಜೊತೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ  ಹಾಗೂ ಕ್ಷೇತ್ರದ ಹಾಲಿ ಸಂಸದ ಸಂಗಣ್ಣ ಕರಡಿ ಬಿಜೆಪಿಗೆ  ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷದ ಸೇರಿದ್ದಾರೆ.  ಈ ಎಲ್ಲಾ ಕರಾಣಗಳು ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ ಹಿಟ್ನಾಳ್ ಗೆಲುವಿಗೆ ಆನೆ ಬಲ ಬಂದಿದೆ ಎಂಬುದು ಆ ಪಕ್ಷದವರ ನಂಬಿಕೆಯಾಗಿದೆ.

ಬಿಜೆಪಿ ಅಭ್ಯರ್ಥಿಯಾಗಿ ಡಾ.ಬಸವರಾಜ ಕ್ಯಾವಟರ್ ಕಣದಲ್ಲಿ ಇದ್ದು  ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ತೀವ್ರ ಪೈಪೋಟಿ ಒಡ್ಡಿದ್ದಾರೆ. ‌ಕರಡಿ ಎಲ್ಲಿ ಕುಣಿಯಲಿ ನಾವಂತು ಪಕ್ಷದ ನಿಷ್ಟಾವಂತರೆಂದು ಕಾರ್ಯಕರ್ತರ ಪಡೆ ಹೇಳುತ್ತಿದರ. ಹೊಸ ಮುಖವಾಗಿರುವ ಕ್ಯಾವಟರ್ ಗೆ ಮೋದಿ ಹವಾ ಹಾಗು  ಕ್ಷೇತ್ರದಲ್ಲಿ ಪಕ್ಷ ಉತ್ತಮ ಸಂಘಟಕರನ್ನು ಹೊಂದಿರುವುದು  ಸಹಾಯವಾಗಲಿದೆಂಬುದಾಗಿದೆ. ಕ್ಷೇತ್ರದಲ್ಲಿ ಕುಟುಂಬದ  ಮತ್ತು ಹೊಂದಾಣಿಕೆಯ ರಾಜಕಾರಣಕ್ಕೆ ಡಾ.ಬಸವರಾಜ ಕ್ಯಾವಟರ್ ಅಭ್ಯರ್ಥಿಯಾಗುವಂತಾಗಿದೆ.

ಬಿಜೆಪಿಗೆ ಜೆಡಿಎಸ್‌ ಮೈತ್ರಿಯಾಗಿ ಎಂಟೂ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದೆ. ಎಂಟು ಕ್ಷೇತ್ರಗಳ ಪೈಕಿ ಸಿಂಧನೂರು ಕ್ಷೇತ್ರದಲ್ಲಿ ಜೆಡಿಎಸ್‌ ಹಿಡಿತ ಹೊಂದಿದೆ. ವೆಂಕಟರಾವ್‌ ನಾಡಗೌಡ ಹಿಂದೆ ಜೆಡಿಎಸ್‌ನಿಂದ ಗೆದ್ದಿದ್ದು ಮೈತ್ರಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಅಲ್ಲದೇ ಜನಾರ್ದನ ರೆಡ್ಡಿ ಕಮಲಕ್ಕೆ ಆಸರೆಯಾಗಿದ್ದಾರೆ. ಆದರೆ ಹಿಂದೆ ಬಿಜೆಪಿ ಸಂಸದರಾಗಿದ್ದ ಸಂಗಣ್ಣ ಕರಡಿ ಟಿಕೆಟ್‌ ತಪ್ಪಿದ್ದರಿಂದ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಇದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಏಕೆಂದರೆ ಅವರು ನಾಲ್ಕು ಬಾರಿ ಶಾಸಕ, 2 ಬಾರಿ ಸಂಸದರಾಗಿ ತಮ್ಮದೇ ಹಿಡಿತ ಹೊಂದಿದ್ದಾರೆ. ಅವರ ಸೇರ್ಪಡೆಯಿಂದ ಕೈಗೆ ಬಲ ಬಂದಂತಾಗಿದೆ. ಕೊಪ್ಪಳದಲ್ಲಿ ಸಹೋದರನೇ ಶಾಸಕರಾಗಿರುವುದು ಹಿಟ್ನಾಳ್‌ಗೆ ವರವಾಗಿದ್ದರೆ, ಗಂಗಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಲ್ಲಿ ಬಣ ಬಡಿದಾಟವಿದ್ದರೂ ಇಬ್ಬರೂ ಕೈ ಅಭ್ಯರ್ಥಿ ಪರವೇ ನಿಂತಿದ್ದಾರೆ. ಆದರೆ ಒಳ ಏಟು ಯಾರಿಗೆ ಹೊಡೆತ ಕೊಡುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಕೊಪ್ಪಳ ಲೋಕಸಭಾ ಸಭಾ ಕ್ಷೇತ್ರ ಐತಿಹಾಸಿಕ ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಮತ್ತು ಭತ್ತದ ಖಣಜ ಜೊತೆಗೆ ಉಕ್ಕಿನ ಕೈಗಾರಿಕೆ ಮತ್ತು ಅಂತರ ರಾಷ್ಟ್ರೀಯ ಮಟ್ಟದಲ್ಲಿ ಟೋಸ್ ಕ್ಲಸ್ಟರ್.  ಎಷ್ಯಾದಲ್ಲಿಯೆ ಅತಿದೊಡ್ಡ ರೈಸ್ ಟೆಕ್ನಾಲಜಿ ಪಾರ್ಕ್ ಹೊಂದಿದೆ.

ಚುನಾವಣೆಯ ಕಾವು ಕ್ಷೇತ್ರದಲ್ಲಿ ಸೂರ್ಯನ ಪ್ರಕರತೆಗಿಂತ ಹೆಚ್ಚಾಗಿದೆ 43 ಡಿಗ್ರಿ ಸೆಲ್ಸಿಯಸ್ ಬಿಸಲಿನ ತಾಪ ಇದೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಾಯಕರು ಇದನ್ನು ಲೆಕ್ಕಿಸದೆ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ಕ್ಷೇತ್ರ ವ್ಯಾಪ್ತಿ:

ಈ ಕ್ಷೇತ್ರವು ಜಿಲ್ಲೆಯ ಕುಷ್ಟಗಿ, ಕನಕಗಿರಿ, ಗಂಗಾವತಿ, ಯಲಬುರ್ಗಾ ಹಾಗೂ ಕೊಪ್ಪಳ ವಿಧಾನಸಭಾ ಕ್ಷೇತ್ರಗಳು, ರಾಯಚೂರು ಜಿಲ್ಲೆಯ ಸಿಂಧನೂರು, ಮಸ್ಕಿ ಮತ್ತು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.

9,12,818 ಪುರುಷ ಮತದಾರರು, 9,38,750 ಮಹಿಳಾ ಮತದಾರರು ಹಾಗೂ 132 ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಸೇರಿದಂತೆ

ಒಟ್ಟು 18,51,700 ಮತದಾರರು ಇದ್ದಾರೆ. ಇವರಲ್ಲಿ

46162 ಯುವ ಮತದಾರರು, 25,619 ವಿಕಲಚೇತನ ಮತದಾರರು, 12,900 ಮತದಾರರು 85 ವರ್ಷ ಮೇಲ್ಪಟ್ಟವರು ಹಾಗೂ 609 ಸೇವಾ ಮತದಾರರಿದ್ದಾರೆ . ಕಳೆದ 2019ರ ಚುನಾವಣೆಯಲ್ಲಿ  ಮತದಾನ ಪ್ರಮಾಣ ಶೇ.68.41 ರಷ್ಟಾಗಿತ್ತು. ಈ ಬಾರಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಅಗತ್ಯವಿದ್ದಲ್ಲಿ ಟೇಬಲ್‌ ಬಳಸಿಕೊಳ್ಳುವುದು.

ಇದನ್ನೂ ನೋಡಿ: ಕೊಪ್ಪಳ ಲೋಕಸಭೆ : ಬಿಜೆಪಿಯ ಬಂಡಾಯ ಕಾಂಗ್ರೆಸ್‌ಗೆ ಲಾಭ, ಕರಡಿಯ ಕುಣಿತದ ಮೇಲೆ ಫಲಿತಾಂಶ Janashakthi Media

Donate Janashakthi Media

Leave a Reply

Your email address will not be published. Required fields are marked *