ಸಂಸದರಿಗೆ ಸರ್ವಾಧಿಕಾರಿ ಆದೇಶಗಳು, ಸಂಸತ್ತಿನ ಮೇಲೆ ಲಜ್ಜೆಗೆಟ್ಟ ಪ್ರಹಾರ-ಸಿಪಿಐ(ಎಂ) ಪೊಲಿಟ್‍ ಬ್ಯುರೊ

ಇವನ್ನು ತಕ್ಷಣವೇ ಹಿಂತೆಗೆದುಕೊಳ್ಳಲು ಕೇಂದ್ರ ಸರಕಾರಕ್ಕೆ ಕರೆ

ನವದೆಹಲಿ: ಸಂಸತ್ ಭವನದ ಆವರಣದಲ್ಲಿ ಸಂಸತ್ತಿನ ಸದಸ್ಯರು ಯಾವುದೇ ಪ್ರತಿಭಟನಾ ಕಾರ್ಯಗಳನ್ನು ನಡೆಸುವಂತಿಲ್ಲ ಎಂಬುದು ಸರ್ವಾಧಿಕಾರಿ ಆದೇಶ ಎಂದು ಇದನ್ನು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡಿಸಿದೆ.

ದೇಶ ಮತ್ತು ಜನರಿಗೆ ಸಂಬಂಧಿಸಿದ ಎಲ್ಲಾ ಪ್ರಮುಖ ವಿಷಯಗಳ ಬಗ್ಗೆ ತಮ್ಮ ದೃಷ್ಟಿಕೋನವನ್ನು ಮುಂದಿಡಲು ಸಂಸದರು ಪ್ರತಿಭಟನೆಗಳನ್ನು ನಡೆಸುವುದು ವಾಢಿಕೆಯಾಗಿದೆ. ಭಾರತೀಯ ಸಂಸತ್ತು ಕಾರ್ಯನಿರ್ವಹಿಸಲು ಆರಂಭಿಸಿದಾಗಿನಿಂದ ಇದು ಅವರ ಪ್ರಜಾಸತ್ತಾತ್ಮಕ ಹಕ್ಕಾಗಿದೆ.

ಈ ಆದೇಶ ಅಸಂಸದೀಯ ಪದಗಳ ಪಟ್ಟಿಯನ್ನು ವಿಸ್ತರಿಸಲು ಹೊರಡಿಸಲಾದ ಹೊಸ ನಿರ್ದೇಶನದ ಜೊತೆಗೆ ಬಂದಿದೆ., ಇದರಲ್ಲಿ ‘ಅಸಮರ್ಥತೆ’ಯಂತಹ ಸರ್ಕಾರದ ವಿರುದ್ಧ ಆಗಾಗ್ಗೆ ಬಳಸುವ ಪದ ಸಹ ಸೇರಿದೆ. ಪ್ರತಿಭಟನೆಗಳನ್ನು ನಿಷೇಧಿಸುವ ಆದೇಶವು ಸಂಸತ್ತಿನ ಮೇಲೆ ಅದರ ಸ್ವತಂತ್ರ ಕಾರ್ಯನಿರ್ವಹಣೆ ಮತ್ತು ಸಂಸದರ ಅವಿಭಾಜ್ಯ ಹಕ್ಕುಗಳ ಮೇಲೆ ಅತ್ಯಂತ ಲಜ್ಜೆಗೆಟ್ಟ ನಿರಂಕುಶ ಪ್ರಹಾರವಾಗಿದೆ ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ಹೇಳಿದೆ.

ಸಂಸತ್ತಿನಲ್ಲಿ ಪ್ರತಿನಿಧಿಗಳನ್ನು ಹೊಂದಿರುವ ರಾಜಕೀಯ ಪಕ್ಷಗಳೋಂದಿಗೆ ಸಮಾಲೋಚಿಸದೆ ಕೈಗೊಂಡಿರುವ ಈ ಏಕಪಕ್ಷೀಯ ನಿರ್ಧಾರವು ನಿರ್ಲಜ್ಜ ಪ್ರಜಾಪ್ರಭುತ್ವ-ವಿರೋಧಿ ಕ್ರಮವಾಗಿದೆ. ಇನ್ನೂ ಕೆಟ್ಟ ಸಂಗತಿಯೆಂದರೆ, ಸಂಸತ್ತಿನ ಅಧಿವೇಶನ ಪ್ರಾರಂಭವಾಗುವ ಮುನ್ನಾದಿನದಂದು ಈ ಆದೇಶಗಳನ್ನು ಹೊರಡಿಸಲಾಗಿದೆ ಎಂದಿರುವ ಸಿಪಿಐ(ಎಂ) ಪೊಲಿಟ್‍ ಬ್ಯುರೊಈ ಪ್ರಜಾಪ್ರಭುತ್ವ ವಿರೋಧಿ ಕ್ರಮಗಳನ್ನು ತಕ್ಷಣವೇ ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರಕ್ಕೆ ಕರೆ ನೀಡಿದೆ.

Donate Janashakthi Media

Leave a Reply

Your email address will not be published. Required fields are marked *