ಶಿವಮೊಗ್ಗ| 23 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ: ಪುರಲೆಯಲ್ಲಿರುವ ಸುಬ್ಬಯ್ಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿ ವಿಷ್ಣುಪ್ರಿಯಾ (23) ಹಾಸ್ಟೆಲ್‌ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಜೂನ್ 2 ಸೋಮವಾರದಂದು ಪತ್ತೆಯಾಗಿದ್ದಾರೆ. ಶಿವಮೊಗ್ಗ

ವಿಷ್ಣುಪ್ರಿಯಾ ಮೂಲತಃ ಬಳ್ಳಾರಿಯವರು. ಅವರ ತಂದೆ ವೆಂಕಟೇಶ್ ಎಂಜಿನಿಯರ್ ಆಗಿದ್ದು, ಪ್ರಸ್ತುತ ಕುಟುಂಬ ಸಮೇತ ಬಹರೇನ್‌ನಲ್ಲಿ ವಾಸಿಸುತ್ತಿದ್ದರು.

ಇದನ್ನೂ ಓದಿ: ನನ್ನ ‘ತಮ್ಮಯ್ಯ’, ಅವರ ಸೋವಿಯೆಟ್ ಪುಸ್ತಕಗಳು ಮತ್ತು ಪುಸ್ತಕ ಸಮಯ : ಬೂಕರ್ ಪ್ರಶಸ್ತಿ ವಿಜೇತೆ ದೀಪಾ ಬಸ್ತಿ

ಎಂಬಿಬಿಎಸ್ ಕೋರ್ಸ್ ಪೂರ್ಣಗೊಳಿಸಿದ್ದ ವಿಷ್ಣುಪ್ರಿಯಾ ಇಂಟರ್ನ್‌ಶಿಪ್‌ ಮಾಡುತ್ತಿದ್ದರು. ಹಾಸ್ಟೆಲ್‌ನಲ್ಲಿ ಅವರ ಜೊತೆಗಿದ್ದ ಸ್ನೇಹಿತೆಯರು ಇಂಟರ್ನ್‌ಶಿಪ್ ಮುಗಿಸಿ ತಮ್ಮ ಊರುಗಳಿಗೆ ಮರಳಿದ್ದು, ವಿಷ್ಣುಪ್ರಿಯಾ ಕೊಠಡಿಯಲ್ಲಿ ಒಬ್ಬರೇ ಇದ್ದರು ಎಂದು ತಿಳಿದುಬಂದಿದೆ.

“ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಾಣಿಸುತ್ತಿದೆ. ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ಪಾಲಕರಿಗೆ ವಿಷಯ ತಿಳಿಸಿದ್ದೇವೆ. ಅವರು ಬಂದು ದೂರು ನೀಡಿದ ನಂತರ ಮುಂದಿನ ಪ್ರಕ್ರಿಯೆ ಕೈಗೊಳ್ಳಲಿದ್ದೇವೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಅವರು ತಿಳಿಸಿದ್ದಾರೆ.

ಇದನ್ನೂ ನೋಡಿ: ಕೊಠಡಿ ನಿರ್ಮಿಸಿ ಎಂದ ಶಿಕ್ಷಕ |ಸನ್ಮಾನಿಸುವ‌ ಜಾಗದಲ್ಲಿ ಅಮಾನತಿನ ಬಹುಮಾನ Janashakthi Media

Donate Janashakthi Media

Leave a Reply

Your email address will not be published. Required fields are marked *