ಯುವತಿ ಸಾವು: ಆತ್ಮಹತ್ಯೆಯೋ? ‘ಮರ್ಯಾದಾ ಹತ್ಯೆ’ಯೋ..?  

  • ಅಂತರ್ಜಾತಿ ಪ್ರೀತಿಗೆ ಮನೆಯವರೇ  ಖಳರಾದರೇ

ಮೈಸೂರು: ಮೈಸೂರಿನಲ್ಲಿ ಮರ್ಯಾದಾ ಹತ್ಯೆಯ ಶಂಕೆ ವ್ಯಕ್ತವಾಗಿದೆ. ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಯುವತಿ ಬಲಿಯಾಗಿದ್ದಾಳೆ ಎಂಬ ಅನುಮಾನ ಮೂಡಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದ್ದು, ಪೋಷಕರೇ ಹತ್ಯೆಗೈದ ಅನುಮಾನ ವ್ಯಕ್ತವಾಗಿದೆ.

ನಂಜನಗೂಡು ಹಾಗೂ ಹೆಚ್. ಡಿ. ಕೋಟೆ ತಾಲೂಕಿನಲ್ಲಿ ಈ ಹಿಂದೆ ಎರಡು ಮರ್ಯಾದಾ ಹತ್ಯೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಈಗ ಮೈಸೂರು ತಾಲ್ಲೂಕಿನ ದೊಡ್ಡಕಾನ್ಯದಲ್ಲಿ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ ತಪ್ಪಿಗೆ ಯುವತಿಯೊಬ್ಬಳು ಬಲಿಯಾಗಿದ್ದು, ಹೆತ್ತವರೇ ಮರ್ಯಾದೆಗೆ ಅಂಜಿ ಹತ್ಯೆ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಯುವತಿ ಕಳುಹಿಸಿದ್ದರೆನ್ನಲಾದ ಪೋಸ್ಟ್

ಗ್ರಾಮದ ದೇವರಾಜಪ್ಪ ಎಂಬುವರ ಪುತ್ರಿ ಮೀನಾಕ್ಷಿ ಎಂಬಾಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಶವ ಪತ್ತೆಯಾಗಿದೆ. ಬಿಎ, ಬಿಎಡ್ ಪದವೀಧರಳಾದಗಿದ್ದ ಮೀನಾಕ್ಷಿ, ಮೈಸೂರಿನ ಕೃಷಿ ಇಲಾಖೆಯಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವೇಳೆ, ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನು ಪ್ರೀತಿಸಿದ್ದಾಳೆ. ಈ ವಿಷಯ ಮನೆಯವರಿಗೆ ತಿಳಿದು ಮಾನಸಿಕ ಹಾಗೂ ದೈಹಿಕವಾಗಿ ಚಿತ್ರಹಿಂಸೆ ನೀಡಿದ್ದಾರೆ. ಅಲ್ಲದೆ ಕೊಲೆ ಮಾಡಲು ಮುಂದಾಗಿದ್ದಾರೆ.

ಯುವತಿಯು ನನಗೆ ರಕ್ಷಣೆ ನೀಡಿ ಎಂದು ಮೈಸೂರು ಎಸ್ಪಿಗೆ ಇಮೇಲ್ ಮೂಲಕ ದೂರು ದಾಖಲಿಸಿದ್ದರು. ಇದೀಗ ಈ ದೂರಿನ ಪ್ರತಿ ವೈರಲ್ ಆಗಿದೆ. ದೌರ್ಜನ್ಯದ ಬಗ್ಗೆ ಒಡನಾಡಿ ಸಂಸ್ಥೆ ಹಾಗೂ ಪೊಲೀಸರಿಗೆ ದೂರು ನೀಡಿದ ನಂತರವೂ ಅಣ್ಣ ಹಾಗೂ ಪೋಷಕರಿಂದ ಚಿತ್ರಹಿಂಸೆ ಮುಂದುವರೆದಿತ್ತು ಎಂದು ತಿಳಿದುಬಂದಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಯುವತಿ ಮೀನಾಕ್ಷಿ ಮೃತ ದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೂಲಗಳ ಪ್ರಕಾರ ಪೋಷಕರೇ ಮರ್ಯಾದೆಗೆ ಹೆದರಿ ಮಗಳನ್ನು ಕೊಲೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮೈಸೂರಿನ ದಕ್ಷಿಣ ಠಾಣೆಯಲ್ಲಿ ಅನುಮಾನಾಸ್ಪದ ಸಾವಿನ ಪ್ರಕರಣ ದಾಖಲಾಗಿದೆ. ಆದರೆ, ಯುವತಿಯ ಪೋಷಕರು ಇದು ಆತ್ಮಹತ್ಯೆ ಎಂದು ವಾದಿಸುತ್ತಿದ್ದು, ಇಡೀ ಪ್ರಕರಣವನ್ನು ಮರೆಮಾಚುತ್ತಿದ್ದಾರೆ ಎನ್ನಲಾಗಿದೆ.

 

Donate Janashakthi Media

Leave a Reply

Your email address will not be published. Required fields are marked *